ವೀಕೆಂಡ್ ಕರ್ಫ್ಯೂ : ದ.ಕ. ಜಿಲ್ಲೆಯಲ್ಲಿ ವಾಹನ, ಜನ ಸಂಚಾರ ವಿರಳ
Update: 2021-08-07 04:37 GMT
ಮಂಗಳೂರು : ಕೊರೋನ ಹೆಚ್ಚಳ ಭೀತಿಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಹಾಗೂ ಜನ ಸಂಚಾರ ವಿರಳವಾಗಿದೆ.
ದಿನಸಿ, ತರಕಾರಿ, ಮಾಂಸ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳು, ಬೀದಿ ಬದಿ ವ್ಯಾಪಾರಕ್ಕೆ ಬೆಳಗ್ಗೆ 5 ರಿಂದ ಮಧ್ಯಾಹ್ನ 2ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಆದರೆ ಗ್ರಾಹಕರ ಸಂಖ್ಯೆ ವಿರಳವಾಗಿದೆ. ಅಗತ್ಯ ವಸ್ತುಗಳ ಸಾಗಾಟದ ವಾಹನಗಳು, ದ್ವಿಚಕ್ರ ವಾಹನಗಳು ಮತ್ತು ಆಟೊ ರಿಕ್ಷಾಗಳು ಓಡಾಡುತ್ತಿವೆ.
ಬೆಳಗ್ಗೆ ಹೊತ್ತು ಬೆರಳೆಣಿಕೆಯಷ್ಟು ಖಾಸಗಿ, ಸಿಟಿ ಬಸ್ ಗಳು ರಸ್ತೆಗಿಳಿದಿದ್ದರೂ ಪ್ರಯಾಣಿಕರಿಲ್ಲದ ಕಾರಣ ಅವುಗಳೂ ಸಂಚಾರವನ್ನು ಸ್ಥಗಿತಗೊಳಿಸುತ್ತಿವೆ ಎಂದು ತಿಳಿದುಬಂದಿದೆ.