ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರವಾಸ

Update: 2021-08-09 13:50 GMT

ಉಡುಪಿ, ಆ.9: ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಆ.10 ಮತ್ತು 11ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಪ್ರವಾಸ ಕೈಗೊಳ್ಳಲಿದ್ದು, ಅವುಗಳ ವಿವರ ಹೀಗಿದೆ.

ಆ.10ರಂದು ಬೆಳಗ್ಗೆ 7ರಿಂದ 9 ರವರೆಗೆ ಕೋಟದ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕಾರ, 9:45ಕ್ಕೆ ಆನೆಗುಡ್ಡೆ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ, 10:30ಕ್ಕೆ ಕುಂದಾಪುರ ಬಿಜೆಪಿ ಕಚೇರಿ ಭೇಟಿ. ಅಪರಾಹ್ನ 1:30ಕ್ಕೆ ಮಂಗಳೂರಿಗೆ ಪ್ರಯಾಣ. ಅಪರಾಹ್ನ 3 ರಿಂದ 4 ದಕ್ಷಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಭೆ, ಸಂಜೆ 4 ಕ್ಕೆ ಕದ್ರಿ ಮಂಜುನಾಥೇಶ್ವರ ದೇವಸ್ಥಾನ ಭೇಟಿ, 4:45ಕ್ಕೆ ಮಂಗಳಾದೇವಿ ದೇವಸ್ಥಾನ ಭೇಟಿ, 5:30ಕ್ಕೆ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ.

ಆ.11ರಂದು ಬೆಳಗ್ಗೆ 7ರಿಂದ 9 ರವರೆಗೆ ಕೋಟದ ಗೃಹ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ಮತ್ತು ಅಹವಾಲು ಸ್ವೀಕಾರ, 10:30ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಂತರ ಮಂಗಳೂರಿಗೆ ತೆರಳುವರು.

ಅಪರಾಹ್ನ 3 ರಿಂದ 5:30ರವರೆಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ. ಬಳಿಕ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News