ಉಡುಪಿ: ಆ.12ರಂದು 200 ಹಾಸಿಗೆಗಳ ಜಿಲ್ಲಾಸ್ಪತ್ರೆಗೆ ಶಂಕುಸ್ಥಾಪನೆ

Update: 2021-08-11 14:28 GMT

ಉಡುಪಿ, ಆ.11: ಜಿಲ್ಲಾಡಳಿತ ಹಾಗೂ ಜಿಪಂ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನಿಯರಿಂಗ್ ಘಟಕ ಬೆಂಗಳೂರು, ಜಿಲ್ಲಾಸ್ಪತ್ರೆ ಉಡುಪಿ ಇವರ ವತಿಯಿಂದ, 250 ಹಾಸಿಗೆಗಳ ಉಡುಪಿ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡದ ಶಂಕುಸ್ಥಾಪನಾ ಸಮಾರಂಭ ಆ.12ರಂದು ಅಪರಾಹ್ನ 3:30ಕ್ಕೆ ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆಯಲಿದೆ.

ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ. ಶಾಸಕ ಕೆ. ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರಿೀನಿವಾಸ ಪೂಜಾರಿ ಉಪಸ್ಥಿತರಿರುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News