ಆ.12, 13ರಂದು ಸಿಎಂ ಬಸವರಾಜ ಬೊಮ್ಮಾಯಿ ದ.ಕ. ಜಿಲ್ಲಾ ಪ್ರವಾಸ

Update: 2021-08-11 14:47 GMT

ಮಂಗಳೂರು, ಆ.11: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆ.12,13ರಂದು ದ.ಕ. ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಆ.12ರಂದು ಬೆಳಗ್ಗೆ 9:50ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಡುವ ಅವರು 10:50ಕ್ಕೆ ಮಂಗಳೂರಿನ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11:30ಕ್ಕೆ ನಗರದ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕುರಿತಂತೆ ಜಿಲ್ಲಾಡಳಿತದೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು.

ಅಂದು ಮಧ್ಯಾಹ್ನ 2:30ಕ್ಕೆ ಮಂಗಳೂರಿನಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ 3:30ಕ್ಕೆ ಉಡುಪಿಗೆ ತೆರಳುವರು. ಸಂಜೆ 7 ಗಂಟೆಗೆ ಉಡುಪಿಯಿಂದ ನಿರ್ಗಮಿಸಿ, ರಸ್ತೆ ಮಾರ್ಗವಾಗಿ 8 ಗಂಟೆಗೆ ಮಂಗಳೂರಿಗೆ ಆಗಮಿಸಿ, ಇಲ್ಲಿಯೇ ವಾಸ್ತವ್ಯ ಮಾಡುವರು.

ಆ.13ರ ಬೆಳಗ್ಗೆ 8 ಗಂಟೆಗೆ ಗಡಿಭಾಗದ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡುವರು. 10:30ಕ್ಕೆ ಮಂಗಳೂರಿಗೆ ರಸ್ತೆ ಮೂಲಕ ನಿರ್ಗಮಿಸಿ, 10:50ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು ಎಂದು ಸಿಎಂ ವಿಶೇಷ ಕರ್ತವ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News