ಉಡುಪಿ ತಾಯಿ -ಮಕ್ಕಳ ಆಸ್ಪತ್ರೆ ಸಿಬ್ಬಂದಿ ವೇತನಕ್ಕೆ 50 ಲಕ್ಷ ರೂ. ಬಿಡುಗಡೆ: ರಘುಪತಿ ಭಟ್

Update: 2021-08-11 15:32 GMT

ಉಡುಪಿ, ಆ.11: ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿಗಳ ವೇತನ ಪಾವಾತಿಗಾಗಿ 50 ಲಕ್ಷ ರೂ. ಬಿಡುಗಡೆ ಮಾಡುವ ಬಗ್ಗೆ ಬುಧವಾರ ಬೆಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಅಧಿಕಾರಿ ಗಳೊಂದಿಗೆ ನಡೆಸಿದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಆಯುಷ್ಮಾನ್ ಯೋಜನೆಯ ಸುವರ್ಣ ಆರೋಗ್ಯ ಟ್ರಸ್ಟ್‌ನಿಂದ 50ಲಕ್ಷ ರೂ. ವನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಬಿಡುಗಡೆ ಮಾಡಲಾಗಿದ್ದು, ಈ ಹಣವನ್ನು ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿಗಳ ವೇತನ ಪಾವಾತಿಗಾಗಿ ನೀಡುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಭೆಯಲ್ಲಿ ಹಾಜರಿದ್ದ ಉಡುಪಿ ಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಈ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತಾರ್, ಆಯುಕ್ತ ಕೆ.ವಿ.ತ್ರಿಲೋಕ್ ಚಂದ್ರ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News