ಆ.23ರಂದು ವಿಕಲಚೇತನರಿಗೆ ಸಲಕರಣೆಗಳ ವಿತರಣೆ
Update: 2021-08-21 15:38 GMT
ಉಡುಪಿ, ಆ.21: ಜಿಲ್ಲೆಯ ವಿಕಲಚೇತನರಿಗೆ ಪ್ರಸಕ್ತ ಸಾಲಿನ ಯಂತ್ರ ಚಾಲಿತ ದ್ವಿಚಕ್ರ ವಾಹನ, ಹೊಲಿಗೆ ಯಂತ್ರ, ಟಾಕಿಂಗ್ ಲ್ಯಾಪ್ಟಾಪ್, ಬ್ರೈಲ್ ಕಿಟ್ ವಿತರಣಾ ಕಾರ್ಯಕ್ರಮ ಆ. 23ರಂದು ಅಪರಾಹ್ನ 3 ಗಂಟೆಗೆ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ಮಿಷನ್ ಕಾಂಪೌಂಡ್ನ ಆಶಾನಿಲಯ ಬುದ್ಧಿಮಾಂಧ್ಯ ಮಕ್ಕಳ ಶಾಲೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಂಗವಿಕಲರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.