ಉಡುಪಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ಗೆ ಗೌರವ

Update: 2021-08-22 14:03 GMT

ಉಡುಪಿ, ಆ.22: ಕೊರೋನ ಸಂಕಷ್ಟದ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಾ ದ್ಯಂತ 6000ಕ್ಕೂ ಹೆಚ್ಚು ಕುಟುಂಬಗಳಿಗೆ ರೇಷನ್ ಕಿಟ್ ನೀಡುವುದ ರೊಂದಿಗೆ ಬಡ ರೋಗಿಗಳಿಗೆ ಪ್ರತಿ ತಿಂಗಳ ಔಷಧಿ, ಸರಕಾರಿ ಕಾಲೇಜ್ಗಳಲ್ಲಿ ಕಲಿಯುವ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ, ಮನೆ ನಿರ್ಮಾಣಕ್ಕೆ ಸಹಾಯ ಧನ, ಬಡ ಹೆಣ್ಣು ಮಕ್ಕಳ ಮದುವೆಗೆ ಚಿನ್ನದ ಸಹಾಯ ನೀಡುತ್ತಿರುವ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಸಂಸ್ಥೆಯನ್ನು ಸಾಲಿಗ್ರಾಮ ಇಂಡಿಯನ್ ಸೀನಿಯರ್ ಚೆಂಬರ್ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಚೇಂಬರ್‌ನ ಅಧ್ಯಕ್ಷ ಬಿಂದು ತಂಕಪ್ಪನ್, ಮಲಬಾರ್ ಗೋಲ್ಡ್ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ರಾಘವೇಂದ್ರ ನಾಯಕ್, ತಂಝೀಮ್ ಶಿರ್ವ ಅವರನ್ನು ಸನ್ಮಾನಿಸಿ ಅಭಿನಂದನಾ ಪತ್ರ ನೀಡಿದರು. ಚೇಂಬರ್‌ನ ಪ್ರಧಾನ ಕಾರ್ಯದರ್ಶಿ ಶಿವಾರಾಂ ಕೆ.ಕೆ., ವೆಂಕಟೇಶ್ ಭಟ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News