​ಉಡುಪಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ

Update: 2021-08-26 15:32 GMT

ಉಡುಪಿ, ಆ. 26: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ -2022 ರಂತೆ ವೇಳಾ ಪಟ್ಟಿಯನ್ನು ಈ ಕೆಳಗಿನಂತೆ ನಿಗದಿಪಡಿಸಿದೆ. ಮತದಾರರ ಪಟ್ಟಿಯ ಪೂರ್ವ ಪರಿಷ್ಕರಣೆ ಚಟುವಟಿಕೆಗಳು ಅಕ್ಟೋಬರ್ 31ರವರೆಗೆ ನಡೆಯಲಿದ್ದು, ನವೆಂಬರ್ 1ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ.

ನ.1ರಿಂದ 30ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶದ್ದು, ಡಿಸೆಂಬರ್ 20ರಂದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದ್ದು, 2022ರ ಜನವರಿ 5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ.

ಅರ್ಹ ಭಾರತೀಯ ನಾಗರಿಕರು ಮತದಾರರರ ಪಟ್ಟಿಗೆ ಹೆಸರುಗಳನ್ನು ಸೇರಿಸಲು ಅರ್ಜಿಗಳನ್ನು ಸಲ್ಲಿಸಲು 2022ರ ಜ.1ಕ್ಕೆ 18 ವಷರ್ ಪೂರ್ಣ ಗೊಂಡಿರಬೇಕು. ಅವರು ಈ ಕೆಳಗೆ ತಿಳಿಸಿರುವ ಯಾವುದಾದರೊಂದು ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಯಸ್ಸಿನ ಬಗ್ಗೆ ದಾಖಲೆಗಳು: ಶಾಲಾ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಆಧಾರ ಕಾರ್ಡ್, ಎಸೆಸೆಲ್ಸಿ/ಪಿಯುಸಿ ಅಂಕಪಟ್ಟಿಗಳು, ಪಾನ್ ಕಾರ್ಡು ಹಾಗೂ ವೈದ್ಯಕೀಯ ಪ್ರಮಾಣ ಪತ್ರ.

ವಾಸ್ತವ್ಯದ ಬಗ್ಗೆ ದಾಖಲೆಗಳು: ಪಡಿತರ ಚೀಟಿ, ಗ್ಯಾಸ್ ಸಿಲಿಂಡರ್ ರಸೀದಿ ಸ್ವೀಕೃತಿ, ವಿದ್ಯುತ್ ಬಿಲ್ ಪಾವತಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಪಾಸ್ ಪೋರ್ಟ್, ವಾಹನ ಚಾಲನಾ ಪರವಾನಗಿ ಪ್ರತಿ, ಬಾಡಿಗೆ ಕರಾರು ಪತ್ರ ಹಾಗೂ ಇನ್ನಿತರ ದಾಖಲೆಗಳು

ನಮೂನೆ- 6: 18 ವರ್ಷ ಪೂರೈಸಿದ ಹೊಸ ಮತದಾರರು ಹಾಗೂ ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದೆಡೆ ವಾಸಸ್ಥಳ ಬದಲಾಯಿಸುವವರು, ದೇಶದಲ್ಲಿ ವಾಸಿಸುವವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು.

ನಮೂನೆ -6ಎ: ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆತಮ್ಮ ಹೆಸರು ಸೇರ್ಪಡೆ ಮಾಡಲು.

ನಮೂನೆ-7: ಮತದಾರರ ಟ್ಟಿಯಿಂದ ಹೆಸರು ತೆಗೆದುಹಾಕಲು.

ನಮೂನೆ-8: ಹೆಸರು, ತಂದೆಯ ಹೆಸರು, ಮನೆ ವಿಳಾಸ, ವಯಸ್ಸಿಗೆ ಹಾಗೂ ಭಾವಚಿತ್ರಕ್ಕೆ ಸಂಬಂಧಿಸಿದಂತೆ ದೋಷಗಳಿದ್ದರೆ.

ನಮೂನೆ-8ಎ: ಒಂದು ವಿಧಾನಸಭಾ ಕ್ಷೇತ್ರದೊಳಗೆ ವಾಸಸ್ಥಳ ಬದಲಾ ಯಿಸಿದ ಸಂದರ್ಭದಲ್ಲಿ ಸಲ್ಲಿಸಬೇಕಾದ ಅರ್ಜಿ.

ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ಮತದಾರರರ ಪಟ್ಟಿಗೆ ಹೆಸರು ನೋಂದಾಯಿಸುವ ಬಗ್ಗೆ ಮತ್ತು ತಿದ್ದುಪಡಿ ಮಾಡುವ ಬಗ್ಗೆ, ತಾಲೂಕು ಕಚೇರಿ ಉಡುಪಿ, ಕಾಪು, ಕಾರ್ಕಳ, ಕುಂದಾಪುರ, ಬೈಂದೂರು, ಬ್ರಹ್ಮಾವರ, ಹೆಬ್ರಿ ಇಲ್ಲಿಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದು.

ಸಾರ್ವಜನಿಕರು ಮತದಾರರರ ಪಟ್ಟಿಗೆ ಹೆಸರು ನೋಂದಾಯಿಸುವ ಬಗ್ಗೆ ಮತ್ತು ತಿದ್ದುಪಡಿ ಮಾಡುವ ಬಗ್ಗೆ ಮಾಹಿತಿಗಾಗಿ, ಜಿಲ್ಲಾಧಿಕಾರಿ ಕಚೇರಿ: 0820-2574991,0820-2574925, ಕೆ.ರಾಜು, ಸಹಾಯಕ ಕಮಿಷನರ್, ಕುಂದಾಪುರ ಹಾಗೂ ಮತದಾರರರ ನೋಂದಣಾಧಿಕಾರಿ.

ಉಡುಪಿ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳು: 08254-231984, ಶೋಭಾಲಕ್ಷ್ಮಿ ಹೆಚ್. ಎಸ್. ತಹಶೀಲ್ದಾರರು ಬೈಂದೂರು ಹಾಗೂ ಸಹಾಯಕ ಮತದಾರರರ ನೋಂದಣಾಧಿಕಾರಿ

ಬೈಂದೂರು ವಿಧಾನಸಭಾ ಕ್ಷೇತ್ರ: 08254-251657, ಕಿರಣ್ ಜಿ.ಗೌರಯ್ಯ ತಹಶೀಲ್ದಾರರು ಕುಂದಾಪುರ ಹಾಗೂ ಸಹಾಯಕ ಮತದಾರರರ ನೋಂದಣಾಧಿಕಾರಿ

ಕುಂದಾಪುರ ವಿಧಾನಸಭಾ ಕ್ಷೇತ್ರ: 08254 -230357, ಪ್ರದೀಪ್ ಕುರ್ಡೇಕರ್, ತಹಶೀಲ್ದಾರರು ಉಡುಪಿ ಹಾಗೂ ಸಹಾಯಕ ಮತದಾರರರ ನೋಂದಣಾಧಿಕಾರಿ,

ಉಡುಪಿ ವಿಧಾನಸಭಾ ಕ್ಷೇತ್ರ 0820-2520417, ರಾಜಶೇಖರ ಮೂರ್ತಿ, ತಹಶೀಲ್ದಾರರು ಬ್ರಹ್ಮಾವರ ಹಾಗೂ ಸಹಾಯಕ ಮತದಾರರರ ನೋಂದಣಾಧಿಕಾರಿ,

ಕಾಪು ವಿಧಾನಸಭಾ ಕ್ಷೇತ್ರ: 0820-2560494, ಪ್ರಕಾಶ್‌ ಎಸ್. ಮರಬಳ್ಳಿ, ತಹಶೀಲ್ದಾರರು ಕಾರ್ಕಳ ಹಾಗೂ ಸಹಾಯಕ ಮತದಾರರರ ನೋಂದಣಾಧಿಕಾರಿ,

ಕಾರ್ಕಳ ವಿಧಾನಸಭಾ ಕ್ಷೇತ್ರ: 08258-230201, ತಹಶೀಲ್ದಾರ್ ಕಚೇರಿ,

ಕಾಪು ತಾಲೂಕು: 0820- 2591444, ತಹಶೀಲ್ದಾರ್ ಕಚೇರಿ,

ಹೆಬ್ರಿ ತಾಲೂಕು: 08253-250201 ಇವರನ್ನು ಅಥವಾ ವ್ಯಕ್ತಿಯು ವಾಸವಿರುವ ವಿಳಾಸದ ವ್ಯಾಪ್ತಿಗೆ ಬರುವ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಓ) ಭೇಟಿಯಾಗಿ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿದಾರರು ಆನ್‌ಲೈನ್ ಮೂಲಕ ವೆಬ್ ಪೋರ್ಟಲ್ -www.ceokarnataka.nic.in- ಮತ್ತು - www.nvsp.in -ನಲ್ಲಿ ಹಾಗೂ ವೋಟರ್ ಹೆಲ್ಫ್‌ಲೈನ್ ಆ್ಯಪ್‌ನಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಹಾಗೂ ತಿದ್ದುಪಡಿಗಳಿಗೆ ಅವಕಾಶವಿರುತ್ತದೆ. ಹಾಗೂ ಮತದಾರರ ಸಹಾಯವಾಣಿ ಕೇಂದ್ರಸಂಖ್ಯೆ 1950 (ಟೋಲ್ ಫ್ರೀ ನಂ.)ಗೆ ಕರೆ ಮಾಡಿ ಕೂಡ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News