ಮಂಗಳೂರು: ಏರ್‌ಪೋರ್ಟ್‌ನಲ್ಲಿ ಸಿಕ್ಕಿದ್ದ ಚಿನ್ನ ಮರಳಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

Update: 2021-08-28 06:22 GMT

ಮಂಗಳೂರು:  ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ಸಿಕ್ಕಿದ್ದ ಚಿನ್ನದ ಬಳೆಯನ್ನು ಅಲ್ಲಿನ ಸಿಬ್ಬಂದಿ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಟ್ರಾಲಿ ರಿಟ್ರಿವರ್‌‌ ಆಗಿರುವ ಡೊಂಬಯ್ಯ ಪೂಜಾರಿ ಅವರಿಗೆ ವಿಮಾನ ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ಚಿನ್ನದ ಬಳೆಯೊಂದು ಸಿಕ್ಕಿತ್ತು. ತಕ್ಷಣವೇ ಅವರು ಬಳೆಯನ್ನು ವಿಮಾನ ನಿಲ್ದಾಣದ ಲಾಸ್ಟ್‌ ಆ್ಯಂಡ್‌‌ ಫೌಂಡ್‌ ಚೇಂಬರ್‌ಗೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಡೊಂಬಯ್ಯ ಪೂಜಾರಿ ಅವರ ಪ್ರಾಮಾಣಿಕತೆ ಅಭಿನಂದನೀಯ ಎಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News