ಮಂಗಳೂರಲ್ಲಿ ಎರಡು ಕಡೆ ಚಿನ್ನದ ಸರ ಕಳವು: ದೂರು

Update: 2021-08-28 17:19 GMT

ಮಂಗಳೂರು, ಆ.28: ಚಿಲಿಂಬಿ ವ್ಯಾಪ್ತಿಯ ಎರಡು ಕಡೆಗಳಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಆಗಂತುಕರು 15 ನಿಮಿಷದ ಅಂತರದಲ್ಲಿ ಇಬ್ಬರು ಮಹಿಳೆಯರ ಚಿನ್ನದ ಸರ ಕಳವುಗೈದ ಘಟನೆ ನಡೆದಿದೆ.

ಶುಕ್ರವಾರ ರಾತ್ರಿ 8:10ರ ಸಮಯದಲ್ಲಿ ಚಿಲಿಂಬಿ ಸಾಯಿ ಬಾಬಾ ಮಂದಿರ ಸಮೀಪ ದ್ವಿಚಕ್ರ ವಾಹನದಲ್ಲಿ ಬಂದು ನಿಂತಿದ್ದ ಯುವಕರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಗೆ ಕೈ ಹಾಕಿ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದಾರೆ.

ಇದಾದ ಕೆಲಹೊತ್ತಿನ ನಂತರ ಉರ್ವ ಚಿಲಿಂಬಿ ಎರಡನೇ ಕ್ರಾಸ್‌ನಲ್ಲಿ ಮಹಿಳೆಯೊಬ್ಬರು ಮನೆಯ ಗೇಟ್ ಹಾಕುತ್ತಿದ್ದರು. ಈ ಸಂದರ್ಭ ವಿಳಾಸ ಕೇಳುವ ನೆಪದಲ್ಲಿ ಹತ್ತಿರ ಬಂದ ಯುವಕರು ಮಹಿಳೆಯ ಚಿನ್ನದ ಸರವನ್ನು ಎಳೆದು ಪರಾರಿಯಾಗಿದ್ದಾರೆ. ಎರಡು ಘಟನೆಗಳು ಕೆಲವೇ ನಿಮಿಷ ದಲ್ಲಿ ನಡೆದ ಕಾರಣ ಒಂದೇ ತಂಡದಿಂದ ಕೃತ್ಯ ನಡೆದಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News