ಉಪ್ಪಿನಂಗಡಿ: ಪಿಕಪ್ ಢಿಕ್ಕಿ; ಲಾರಿ ರಿಪೇರಿ ಮಾಡುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತ್ಯು

Update: 2021-08-30 13:56 GMT

ಉಪ್ಪಿನಂಗಡಿ, ಆ. 30: ಕೆಟ್ಟು ನಿಂತ ಲಾರಿಯನ್ನು ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ವೇಳೆ ಬೊಲೆರೋ ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೆಕ್ಯಾನಿಕಲ್ ಗಳು ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಬೆದ್ರೋಡಿಯಲ್ಲಿ ಸೋಮವಾರ ಸಂಜೆ ನಡೆದಿದೆ. 

ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಈ ಅಪಘಾತ ಸಂಭವಿಸಿದೆ. 

ರಸ್ತೆ ಬದಿ ಕೆಟ್ಟು ನಿಂತಿದ್ದ ಆಂಧ್ರಪ್ರದೇಶದ ಲಾರಿಯನ್ನು ಮೂವರು ಮೆಕ್ಯಾನಿಕಲ್ ಗಳು ದುರಸ್ತಿ ಮಾಡುತ್ತಿದ್ದ ವೇಳೆ ಬೊಲೆರೋ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. 

ಅಪಘಾತದಿಂದ ಇಬ್ಬರು ಮೆಕ್ಯಾನಿಕಲ್ ಗಳು ಸ್ಥಳದಲ್ಲೇ ಮೃತಪಟ್ಟಿದ್ದರೆ ಮತ್ತೋರ್ವ ತೀವ್ರ ಸ್ವರೂಪದ ಗಂಭೀರ ಗಾಯಗೊಂಡಿದ್ದಾರೆ. ಮೃತ ಮೆಕ್ಯಾನಿಕಲ್ ಗಳು ಆಂಧ್ರಪ್ರದೇಶ ಮೂಲದವರು ಎಂದು ತಿಳಿದು ಬಂದಿದೆ. 

ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News