ವಿದ್ಯಾರ್ಥಿ ಆತ್ಮಹತ್ಯೆ
Update: 2021-08-30 15:46 GMT
ಕಾರ್ಕಳ, ಆ.30: ವಿದ್ಯಾರ್ಥಿಯೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನೀರೆ ಗ್ರಾಮದ ಪಾಲಟ್ಟ ಎಂಬಲ್ಲಿ ನಡೆದಿದೆ.
ಮೃತರನ್ನು ನೀರೆ ಪಾಲಟ್ಟ ನಿವಾಸಿ ಸದಾಶಿವ ಎಂಬವರ ಮಗ ಅನೀಶ್ (19) ಎಂದು ಗುರುತಿಸಲಾಗಿದೆ. ಇವರು ಹಿರಿಯಡ್ಕ ಮೈಟೆಕ್ ಐಟಿಐನಲ್ಲಿ ಅಟೋ ಮೊಬೈಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದು, ಮಧ್ಯಾಹ್ನ ನಡೆಯುವ ಪರೀಕ್ಷೆಗೆ ಹೊರಡುವ ಮೊದಲು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.