ಇ-ಕೆವೈಸಿ ನೊಂದಾವಣೆಗೆ ಸೂಚನೆ

Update: 2021-08-31 16:10 GMT

ಉಡುಪಿ, ಆ.31: ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಸೆಪ್ಟಂಬರ್ 10 ರೊಳಗೆ ತಮ್ಮ ಬೆರಳಚ್ಚು ನೊಂದಾಯಿಸಿಕೊಳ್ಳಬೇಕು. ಪ.ಜಾತಿ/ಪಂಗಡಕ್ಕೆ ಸೇರಿದ ಪಡಿತರ ಚೀಟಿದಾರರು ತಮ್ಮ ಜಾತಿ ಪ್ರಮಾಣ ಪತ್ರ ಮತ್ತು ಅನಿಲ ಸಂಪರ್ಕ ಹೊಂದಿರುವ ಮಾಹಿತಿಯನ್ನು ಹಾಗೂ ತಮ್ಮ ಮೊಬೈಲ್ ದೂರವಾಣಿ ಸಂಖ್ಯೆ ಮಾಹಿತಿಯನ್ನು ಇ-ಕೆವೈಸಿ ಮಾಡಲು ನ್ಯಾಯಬೆಲೆ ಅಂಗಡಿಗೆ ಕಡ್ಡಾಯವಾಗಿ ತರುವಂತೆ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News