ಪುತ್ತೂರು: ಪ್ರಶಸ್ತಿ ಪುರಸ್ಕೃತ ಶಿಕ್ಷಕಿಗೆ ಕ್ಯಾಂಪಸ್ ಫ್ರಂಟ್ ವತಿಯಿಂದ ಸನ್ಮಾನ

Update: 2021-09-07 14:26 GMT

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪ್ರೌಢ ಶಾಲಾ ವಿಭಾಗದ ದೈಹಿಕ ಶಿಕ್ಷಕಿ ಗೀತಾಮಣಿ ಎ. ಸ್ ಅವರನ್ನು ಸೋಮವಾರ  ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ  ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಕಾರ್ಯದರ್ಶಿ ಮುಸ್ತಾಫ ಕೊಡಿಪ್ಪಾಡಿ, ಜೊತೆ ಕಾರ್ಯದರ್ಶಿ ಫಾರೂಕ್ ಕಬಕ, ಜಿಲ್ಲಾ ಸಮಿತಿ ಸದಸ್ಯರಾದ ಶಮ್ಮಾಸ್ ಬನ್ನೂರ್, ರಫೀಕ್ ಕೆಮ್ಮಾಯಿ ಹಾಗೂ ಶಾಲಾ ಶಿಕ್ಷಕ ವೃಂದದವರು  ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News