ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಉಡುಪಿ, ಸೆ.7: ಪ್ರಸಕ್ತ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ, ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ, ಮೈಕ್ರೋ ಕ್ರೆಡಿಟ್ ಹಾಗೂ ಗಂಗಾ ಕಲ್ಯಾಣ ಯೋಜನೆ, ಭೂಒಡೆತನ ಯೋಜನೆ, ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದ ಸಾಲ ಸೌಲಭ್ಯಕ್ಕಾಗಿ ಅರ್ಹ ಫಲಾನುಭಗಳಿಂದ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಅವಧಿಯನ್ನು ಸೆ.10 ಮತ್ತು 15ರವರೆಗೆ ವಿಸ್ತರಿಸಲಾಗಿದೆ.
ಅರ್ಜಿಗಳನ್ನು -www.adcl.karnataka.gov.inಮತು https://adijambava.online ನಲ್ಲಿ ಸೆಪ್ಟೆಂಬರ್ 10 ರವರೆಗೆ ಹಾಗೂ- www.banjarathanda.kar.nic.in-ನಲ್ಲಿ ಸೆಪ್ಟೆಂಬರ್ 15ರವರೆಗೆ ವಿಸ್ತರಿಸ ಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574884ನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.