ಮೃತ ತಂಗಿಯ ಚಿಂತೆಯಲ್ಲಿ ಅಕ್ಕ ಆತ್ಮಹತ್ಯೆ
Update: 2021-09-12 16:19 GMT
ಶಂಕರನಾರಾಯಣ, ಸೆ.12: ಮೃತಪಟ್ಟ ತಂಗಿಯ ಚಿಂತೆಯಲ್ಲಿ ಮನನೊಂದ ಅಕ್ಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಪಾರು ಗ್ರಾಮದ ತಲ್ಕಾಲುಗುಡ್ಡೆ ಎಂಬಲ್ಲಿ ನಡೆದಿದೆ.
ಮೃತರನ್ನು ತಲ್ಕಾಲು ಗುಡ್ಡೆಯ ರಾಧ(56) ಎಂದು ಗುರುತಿಸಲಾಗಿದೆ. ಮೂರು ತಿಂಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟ ತಂಗಿಯ ಚಿಂತೆಯಲ್ಲಿ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡ ಇವರು ಸೆ.5ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದ ರಾಧ ಸೆ.11ರಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.