ಉಡುಪಿ ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರಾಗಿ ಕಾ.ವೀ.ಕೃಷ್ಣದಾಸ್ ನೇಮಕ

Update: 2021-11-02 17:02 GMT

ಮಂಗಳೂರು/ಉಡುಪಿ, ನ.2: ಕವಿ, ಸಂಘಟಕ ಕಾ.ವೀ.ಕೃಷ್ಣದಾಸ್‌ರನ್ನು ಉಡುಪಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಪ್ರಭಾರ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಮೈಸೂರಿನ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ರಾಜ್ಯಾಧ್ಯಕ್ಷರಾಗಿರುವ ಕರ್ನಾಟಕ ವಿಧಾನ ಪರಿಷತ್ ನ ಮಾಜಿ ಸದಸ್ಯ ತೋಂಟದಾರ್ಯ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಧರ್ಮದರ್ಶಿಗಳ ಸಭೆಯಲ್ಲಿ ಕೇಂದ್ರ ಸಮಿತಿ ಸಂಚಾಲಕರಾಗಿರುವ ಎಂ.ಜಿ.ಅರಸ್ ಮತ್ತು ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಇರಾ ನೇಮು ಪೂಜಾರಿಯವರ ಶಿಫಾರಸ್ಸಿನಂತೆ ಕಾ.ವೀ.ಕೃಷ್ಣದಾಸ್‌ರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಜಿಲ್ಲಾಧ್ಯಕ್ಷರಾಗಿದ್ದ ತಾರಾ ಆಚಾರ್ಯರನ್ನು ಜಿಲ್ಲಾ ಗೌರವಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಸದ್ಯ ಕಾ.ವೀ.ಕೃಷ್ಣದಾಸ್ ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಹೆಚ್ಚುವರಿಯಾಗಿ ಉಡುಪಿ ಜಿಲ್ಲಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ನೀಡಲಾಗಿದೆ. ನಿಯಮಾವಳಿಗನುಸಾರ ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳು ಆಯ್ಕೆ ಮಾಡಿಕೊಳ್ಳುವ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯ ತಾಲೂಕುಗಳಿಗೆ ತಾಲೂಕು ಅಧ್ಯಕ್ಷರುಗಳನ್ನು ನೇಮಕ ಅಧಿಕಾರವನ್ನು ರಾಜ್ಯಾಧ್ಯಕ್ಷರು ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News