ಸ್ಕೂಟರ್ ಢಿಕ್ಕಿ: ಪಾದಚಾರಿ ಮಹಿಳೆಗೆ ಗಾಯ

Update: 2021-11-04 16:34 GMT

ಮಂಗಳೂರು, ನ.4: ಸ್ಕೂಟರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೊಬ್ಬರು ಗಾಯಗೊಂಡ ಘಟನೆ ನಗರದ ಕರಂಗಲ್ಪಾಡಿಯಲ್ಲಿ ನಡೆದಿದೆ.

ಗಾಯಾಳು ಮಹಿಳೆಯನ್ನು ಗ್ರೇಸಿ ಡಿಕುನ್ಹ ಎಂದು ಗುರುತಿಸಲಾಗಿದೆ. ಗ್ರೇಸಿ ಕರಂಗಲ್ಪಾಡಿಯ ಬೇಕರಿ ಅಂಗಡಿಯೊಂದಕ್ಕೆ ತಿಂಡಿ ತರಲೆಂದು ರಸ್ತೆಯನ್ನು ದಾಟುತ್ತಿದ್ದ ಸಂದರ್ಭ ಪಿವಿಎಸ್ ಕಡೆಯಿಂದ ಬಂದ ಸ್ಕೂಟರ್ ಢಿಕ್ಕಿ ಹೊಡೆದಿದೆ. ಪರಿಣಾಮ ಗ್ರೇಸಿ ರಸ್ತೆಗೆ ಬಿದ್ದು, ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News