ಉಡುಪಿ ಅಲಂಕಾರ್ ಚಿತ್ರಮಂದಿರದ ಎದುರು ಮೃತ್ಯು ಕೂಪ!

Update: 2021-11-11 16:52 GMT

ಉಡುಪಿ: ನಗರದ ಕವಿ ಮುದ್ದಣ ಮಾರ್ಗದಲ್ಲಿನ ಅಲಂಕಾರ್ ಚಿತ್ರ ಮಂದಿರದ ಎದುರಿನಲ್ಲಿರುವ ಆಳವಾದ ಕಂದಕ ಇದೀ ಮೃತ್ಯು ಕೂಪವಾಗಿ ಮಾರ್ಪಟ್ಟಿದೆ.

ಇಲ್ಲಿ ಪಾದಚಾರಿಗಳು ಬಿದ್ದು ಗಾಯಗೊಂಡಿರುವ ಘಟನೆಗಳು ಬಹಳಷ್ಟು ನಡೆದಿವೆ. ವಾಹನಗಳು ಹೊಂಡದಲ್ಲಿ ಸಿಲುಕಿಕೊಂಡು, ಘಾಸಿಗೊಂಡಿವೆ. ಸಾರ್ವಜನಿಕರು, ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸಿನೆಮಾ ವಿಕ್ಷಕರು, ಆಸ್ಪತ್ರೆಗೆ ತೆರಳುವ ರೋಗಿಗಳು ಸಾಕಷ್ಟು ಮಂದಿ ಇದೇ ಮಾರ್ಗದಲ್ಲಿ ಸಂಚರಿಸುತ್ತಿರುತ್ತಾರೆ.

ಆದುದರಿಂದ ನಗರಸಭೆಯವರು ತಕ್ಷಣ ಕಂದಕಕ್ಕೆ ಚಪ್ಪಡಿ ಅಳವಡಿಸ ಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News