ಪುತ್ತೂರು; ಪೊಕ್ಸೊ ಪ್ರಕರಣದ ಆರೋಪಿ ಪರಾರಿಯಾಗಲು ಸಹಕರಿಸಿದ ಇಬ್ಬರ ಸೆರೆ

Update: 2021-11-14 14:14 GMT

ಪುತ್ತೂರು: ಪೊಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿರುವ ರಾಜು ಹೊಸ್ಮಠ ಎಂಬಾತ ಪರಾರಿಯಾಗಲು ಸಹಕಾರ ನೀಡಿರುವ ಆರೋಪದಡಿಯಲ್ಲಿ ಉಜಿರೆಯ ಗಣೇಶ್ ಮತ್ತು ಮೂಡಿಗೆರೆಯ ಲಿಂಗಪ್ಪ ಎಂಬವರನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ರವಿವಾರ ಬಂಧಿಸಿದ್ದಾರೆ.

ತನ್ನದೇ ಸಮುದಾಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಜು ಹೊಸ್ಮಠ ವಿರುದ್ಧ ಕೆಲವು ದಿನಗಳ ಹಿಂದೆ ಪೊಕ್ಸೊ ಕೇಸು ದಾಖಲಾಗಿತ್ತು.

ಈ ವಿಚಾರ ತಿಳಿಯುತ್ತಿದ್ದಂತೆಯೇ ಆತ  ತಲೆಮರೆಸಿಕೊಂಡಿದ್ದರು. ಆತನನ್ನು ಮೂಡಿಗೆರೆಗೆ ಕಾರಿನಲ್ಲಿ ಕರೆದುಕೊಂಡು ಹೋಗಿ ಬಿಡಲಾಗಿದೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗೆ ಪರಾರಿಯಾಗಲು ಸಹಕಾರ ನೀಡಿದ ಕಾರಣಕ್ಕಾಗಿ ಗಣೇಶ್‌ ಹಾಗೂ ಲಿಂಗಪ್ಪ ಎಂಬವರನ್ನು ಬಂಧಿಸಲಾಗಿದೆ.  ರಾಜು ಹೊಸ್ಮಠ  ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಈ ಮಧ್ಯೆ ಆತ ನಿರೀಕ್ಷಣಾ ಜಾಮೀನಿಗಾಗಿ ಪ್ರಯತ್ನಿಸುತ್ತಿರುವುದಾಗಿ ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News