ಮಾಣಿ; ಅಪಘಾತದ ವೇಳೆ ಘರ್ಷಣೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Update: 2021-11-15 15:13 GMT

ಬಂಟ್ವಾಳ, ನ.15: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಹಳೀರಾದಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ 20ರಿಂದ 30 ಮಂದಿಯ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಸೂರಿಕುಮೇರಿ ನಿವಾಸಿ ಮಹಮ್ಮದ್ ಹನೀಫ್ (43), ಹಳಿರಾ ನಿವಾಸಿ ಜಗದೀಶ್ (25) ಬಂಧಿತರು.

ನ.12ರಂದು ಬೆಂಗಳೂರು ಕಡೆಯ ಶಿಫ್ಟ್ ಕಾರು ಹಾಗೂ ಉಪ್ಪಿನಂಗಡಿ ಕಡೆಯ ಇನ್ನೋವಾ ನಡುವೆ ಅಪಘಾತವಾಗಿ, ಸ್ಥಳದಲ್ಲಿ ಸೇರಿದವರ ನಡುವೆ ಮಾತಿನ ಚಕಮಕಿ ನಡೆದು, ಇತ್ತಂಡದವರು ಪರಸ್ಪರ ಹಲ್ಲೆಗೆ ಮುಂದಾಗಿದ್ದರು. ಪೊಲೀಸರು ಚಾಲಕರನ್ನು ಮಾತನಾಡಿಸಿ ಸಮಾಧಾನ ಪಡಿಸುವ ಸಂದರ್ಭದಲ್ಲಿ ಪೊಲೀಸರ ಮಾತು ಕೇಳದೆ ಶಾಂತಿ ಭಂಗ ಮಾಡುವ ಮೂಲಕ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಈ ಬಗ್ಗೆ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಪ್ರಕರಣದ ಬಗ್ಗೆ ವದಂತಿಗಳನ್ನು ಹಬ್ಬಿಸುವವರ ಮೇಲೆಯೂ ನಿಗಾ ಇಟ್ಟ ಪೊಲೀಸರು ಶಾಂತಿ ಭಂಗಕ್ಕೆ ಕಾರಣವಾದರೆ ಅವರ ವಿರುದ್ಧವೂ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News