​ಉಡುಪಿ: ‘ಪದ್ಮಶ್ರೀ’ ಹಾಜಬ್ಬರಿಗೆ ಸನ್ಮಾನ

Update: 2021-11-16 13:10 GMT

ಉಡುಪಿ, ನ.16: ಇತ್ತೀಚೆಗೆ ರಾಷ್ಟ್ರಪತಿಗಳಿಂದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪಡೆದಿರುವ ಹರೇಕಳ ಹಾಜಬ್ಬ ಅವರಿಗೆ ನಾಳೆ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಸನ್ಮಾನಿಸಲಾಗುವುದು. ಎಂಜಿಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ವತಿಯಿಂದ ನಡೆಯುವ ‘ಆರೆಂಜ್ ಈಸ್ ನಾಟ್ ಜಸ್ಟ್ ಎ ಫ್ರೂಟ್’ ಸಂವಾದ ಕಾರ್ಯಕ್ರಮ ದಲ್ಲೂ ಹಾಜಬ್ಬ ಪಾಲ್ಗೊಳ್ಳಲಿದ್ದಾರೆ.

ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಅಪರಾಹ್ನ 3 ಕ್ಕೆ ನಡೆಯುವ ಈ ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಜ.ಪಿ.ವಿಶ್ವನಾಥ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಹಾಜಬ್ಬರನ್ನು ಸನ್ಮಾನಿಸಲಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ., ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ಉಪಸ್ಥಿತರಿ ರುವರು. ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ಎಸ್. ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News