ನ.28ಕ್ಕೆ ಯಕ್ಷಗಾನ ಕಲಾರಂಗದಿಂದ ಪ್ರಶಸ್ತಿ ಪ್ರದಾನ

Update: 2021-11-20 16:08 GMT

ಉಡುಪಿ, ನ.20: ಉಡುಪಿಯ ಯಕ್ಷಗಾನ ಕಲಾರಂಗದ ವತಿಯಿಂದ ಯಕ್ಷಗಾನದ ಹಿರಿಯ ಸಾಧಕರ ಹೆಸರಿನಲ್ಲಿ ಪ್ರತೀ ವರ್ಷ ಸಂಸ್ಥೆಯು ನೀಡುವ ವಿವಿಧ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಈ ಬಾರಿ 17 ಮಂದಿ ತೆಂಕು ಮತ್ತು ಬಡಗುತಿಟ್ಟಿನ ಕಲಾವಿದರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭ ನ.28ರ ರವಿವಾರ ಅಪರಾಹ್ನ 3:00 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಪ್ರಶಸ್ತಿಯು ತಲಾ 20,000 ರೂ. ನಗದು ಪುರಸ್ಕಾರವನ್ನು ಒಳಗೊಂಡಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.

ಈ ಬಾರಿಯ ಪ್ರಶಸ್ತಿ ವಿಜೇತರ ವಿವರ ಹೀಗಿದೆ: ಡಾ.ಬಿ.ಬಿ. ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ- ಸುರೇಂದ್ರ ಆಲೂರು ಕುಂದಾಪುರ, ಪ್ರೊ.ಬಿ.ವಿ.ಆಚಾರ್ಯ ಸ್ಮರಣಾರ್ಥ ಪ್ರಶಸ್ತಿ-ಶಾಂತಾರಾಮ ಆಚಾರಿ ಬ್ರಹ್ಮಾವರ, ನಿಟ್ಟೂರು ಸುಂದರ ಶೆಟ್ಟಿ- ಮಹೇಶ ಡಿ. ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ- ಸದಾಶಿವ ಕುಲಾಲ ವೇಣೂರು, ಬಿ.ಜಗಜ್ಜೀವನ್‌ದಾಸ್ ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ- ಕೊರಗಪ್ಪ ರೈ ಮಡಾವು, ಕೆ. ವಿಶ್ವಜ್ಞ ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ- ಕೃಷ್ಣ ಜಿ. ನಾಯ್ಕಿ ಬೇಡ್ಕಣಿ, ಕುತ್ಪಾಡಿ ಆನಂದ ಗಾಣಿಗ ಸ್ಮರಣಾರ್ಥ ಪ್ರಶಸ್ತಿ- ದಿನಕರ ಗೋಖಲೆ ಬೆಳ್ತಂಗಡಿ.

ಭಾಗವತ ನಾರ್ಣಪ್ಪ ಉಪ್ಪೂರ ಸ್ಮರಣಾರ್ಥ ಪ್ರಶಸ್ತಿ-ನಾರಾಯಣ ಶಬರಾಯ ಜಿ.ಎ. ಉಡುಪಿ, ದಶಾವತಾರಿ ಮಾರ್ವಿ ರಾಮಕೃಷ್ಣ ಹೆಬ್ಬಾರ್-ಭಾಗವತ ವಾದಿರಾಜ ಹೆಬ್ಬಾರ್ ಸ್ಮರಣಾರ್ಥ ಪ್ರಶಸ್ತಿ- ಬಿ. ಜನಾರ್ದನ ಗುಡಿಗಾರ ಬೆಳ್ತಂಗಡಿ, ಶಿರಿಯಾರ ಮಂಜು ನಾಯ್ಕಿ ಸ್ಮರಣಾರ್ಥ ಪ್ರಶಸ್ತಿ- ಕೊಂಡದಕುಳಿ ರಾಮಚಂದ್ರ ಹೆಗಡೆ ಕುಂಭಾಶಿ, ಕೋಟ ವೈಕುಂಠ ಸ್ಮರಣಾರ್ಥ ಪ್ರಶಸ್ತಿ-ಕೃಷ್ಣ ಮೊಗವೀರ ಮೊಳಹಳ್ಳಿ, ಪಡಾರು ನರಸಿಂಹ ಶಾಸ್ತ್ರಿ ಸ್ಮರಣಾರ್ಥ ಪ್ರಶಸ್ತಿ-ಬೋಳ್ಗೆರೆ ಗಜಾನನ ಭಂಡಾರಿ ಹೊನ್ನಾವರ.

ಕಡಿಯಾಳಿ ಸುಬ್ರಾಯ ಉಪಾಧ್ಯ ಸ್ಮರಣಾರ್ಥ ಪ್ರಶಸ್ತಿ-ವಿಶ್ವೇಶ್ವರ ರಾವ್ ಕಟೀಲು, ಮಲ್ಪೆ ಶಂಕರನಾರಾಯಣ ಸಾಮಗ ಸ್ಮರಣಾರ್ಥ ಪ್ರಶಸ್ತಿ- ನಿಟ್ಟೂರು ಸುಬ್ರಹ್ಮಣ್ಯ ಭಟ್ ಹೊಸನಗರ, ಐರೋಡಿ ರಾಮಗಾಣಿಗ ಸ್ಮರಣಾರ್ಥ ಪ್ರಶಸ್ತಿ- ಎ.ಸದಾನಂದ ಶೆಣೈ ಕಮಲಶಿಲೆ, ಎಂ.ತಿಮ್ಮಯ್ಯ ಸ್ಮರಣಾರ್ಥ ಪ್ರಶಸ್ತಿ- ಅಪ್ಪಕುಂಞ ಮಣಿಯಾಣಿ ಕಾಸರಗೋಡು, ಕೋಳ್ಯೂರು ರಾಮಚಂದ್ರರಾವ್ ಗೌರವಾರ್ಥ ಪ್ರಶಸ್ತಿ- ರಾಜೀವ ಶೆಟ್ಟಿ ಹೊಸಂಗಡಿ, ಶ್ರೀಮತಿ ಪ್ರಭಾವತಿ ಶೆಣೈ, ಯು. ವಿಶ್ವನಾಥ ಶೆಣೈ ಗೌರವಾರ್ಥ ಪ್ರಶಸ್ತಿ- ಬಾಲಕೃಷ್ಣ ಶೆಟ್ಟಿ ಮುಂಡಾಜೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News