ಕ್ಲೀನ್ ಇಂಡಿಯಾ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2021-11-24 16:33 GMT

ಮಂಗಳೂರು : ಅಝಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಭಾರತ ಸರಕಾರದ ಯುವಜನ ಮತ್ತು ಕ್ರೀಡಾ ಮಂತ್ರಾಲಯದ ಆದೇಶದಂತೆ 'ಕ್ಲೀನ್ ಇಂಡಿಯಾ' ಕಾರ್ಯಕ್ರಮವನ್ನು ನೆಹರು ಯುವ ಕೇಂದ್ರದ ಮುಖೇನ ದೇಶದಾದ್ಯಂತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ - ಸಂಘ ಸಂಸ್ಥೆಗಳ ಮೂಲಕ ದಿನಾಂಕ ಅ.1 ರಿಂದ ಅ. 31.2021ರ ವರೆಗೆ ಅನುಷ್ಠಾನ ಗೊಳಿಸಲಾಗಿದೆ.

ಈ ಅವಧಿಯಲ್ಲಿ ನಡೆಸಿದ ಕಾರ್ಯಕ್ರಮದ ಸಂಪೂರ್ಣ ವರದಿಯನ್ನು ಕ್ಲೀನ್ ಇಂಡಿಯಾ ಪ್ರಶಸ್ತಿಗೆ ಸಲ್ಲಿಸುವ ಬಗ್ಗೆ ಭಾರತ ಸರಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ, ನೆಹರು ಯುವ ಕೇಂದ್ರ, ಮಂಗಳೂರು, ಯುವಕ-ಯುವತಿ ಮಂಡಳಿಗಳಿಗೆ ಹಾಗೂ ಸ್ವಯಂ ಸೇವಕರಿಗೆ ಜಿಲ್ಲಾ ರಾಜ್ಯ, ರಾಷ್ಟ್ರೀಯ ಮಟ್ಟದ  2021-22ರ ಸಾಲಿನ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಮಟ್ಟದ ಆಯ್ಕೆ ಹಾಗೂ ರಾಜ್ಯ ಮಟ್ಟದ ಆಯ್ಕೆಗೆ ನಂತರ ರಾಷ್ಟ್ರೀಯ ಮಟ್ಟದ ಆಯ್ಕೆಗೆ ಅರ್ಹತೆ ಪಡೆಯುತ್ತದೆ. ನೆಹರು ಯುವ ಕೇಂದ್ರ ಮಂಗಳೂರು, ಜಿಲ್ಲಾ ಮುಖ್ಯ ಕಛೇರಿ ವಿಳಾಸ :- ಕಂದಾಯ ಭವನ, ನೆಲ ಮಹಡಿ, ಡಿ.ಸಿ. ಕಚೇರಿ ಆವರಣ, ಮಂಗಳೂರು – 575001 ಇವರ ಕಚೇರಿಯಿಂದ ಸಂಪೂರ್ಣ ಮಾಹಿತಿ ಹಾಗೂ ಅರ್ಜಿಗಳನ್ನು ಪಡೆದುಕೊಳ್ಳಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಸುವ ಅಂತಿಮ ದಿನಾಂಕವು 27.11.2021 ಆಗಿದ್ದು, ಆಸಕ್ತ ದಕ್ಷಿಣ ಕನ್ನಡ ಜಿಲ್ಲೆಯ ಯುವಕ/ಯುವತಿ ಮಂಡಳಗಳು, ಸ್ವಯಂ ಸೇವಕರು ಸಂಪೂರ್ಣ ಮಾಹಿತಿ ಹಾಗೂ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ಅರ್ಜಿಗಳನ್ನು ಈ ವಿಳಾಸಕ್ಕೆ ರವಾನಿಸಲು, ಜಿಲ್ಲಾ ಯುವ ಅಧಿಕಾರಿ ನೆಹರು ಯುವ ಕೇಂದ್ರ (ಜಿಲ್ಲಾಧಿಕಾರಿ ಕಚೇರಿ ಆವರಣ) 0824-2422264,  9620402893  ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರಘುವೀರ್ ಸೂಟರ್ ಪೇಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News