ಎಸ್ಸೆಸ್ಸೆಫ್ ಪ್ರತಿಭೋತ್ಸವ: ಬಜಾಲ್ ನ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
Update: 2021-11-26 11:05 GMT
ಮಂಗಳೂರು : ಎಸ್ಸೆಸ್ಸೆಫ್ ದ.ಕ. ಜಿಲ್ಲಾ (ವೆಸ್ಟ್) ಸಮಿತಿಯ ವತಿಯಿಂದ ಇತ್ತೀಚೆಗೆ ನಡೆದ ಜಿಲ್ಲಾ ಪ್ರತಿಬೋತ್ಸವ ಕಾರ್ಯಕ್ರಮದಲ್ಲಿ ಬಜಾಲ್ ನ ವಿದ್ಯಾರ್ಥಿಗಳಾದ ಮುಹಮ್ಮದ್ ರಝಿನ್ ಹಾಗೂ ಮುಹಮ್ಮದ್ ಸಜ್ಜಾದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸೆಕ್ಟರ್, ಡಿವಿಷನ್ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಇದೀಗ ಜಿಲ್ಲಾ ಮಟ್ಟದಿಂದ ಆಯ್ಕೆಯಾಗಿರುವ ಇವರು ನ.26ರಿಂದ ಮೂರು ದಿನಗಳ ಕಾಲ ಕೃಷ್ಣಾಪುರದಲ್ಲಿ ನಡೆಯುವ ರಾಜ್ಯ ಮಟ್ಟದ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಸ್ಪರ್ಧಿಸಲಿದ್ದಾರೆ.