ಉಡುಪಿ; ಕೋವಿಡ್ ನಿಯಮ ಉಲ್ಲಂಘಿಸಿ ಮೆರವಣಿಗೆ ಆರೋಪ : ಸಿಪಿಎಂ ಮುಖಂಡರ ವಿರುದ್ಧ ಪ್ರಕರಣ ದಾಖಲು

Update: 2021-11-30 16:33 GMT
ಫೈಲ್ ಫೋಟೊ 

ಉಡುಪಿ, ನ.30: ಕೋವಿಡ್ ನಿಯಮ ಉಲ್ಲಂಘಿಸಿ ಮೆರವಣಿಗೆ ನಡೆಸಿದ ಆರೋಪದಲ್ಲಿ ಸಿಪಿಎಂ ಮುಖಂಡರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ.28ರಂದು ಸಿಪಿಐ(ಎಂ) ಪಕ್ಷದ 7ನೇ ಜಿಲ್ಲಾ ಸಮ್ಮೇಳನ ಪ್ರಯುಕ್ತ ಯಾವುದೇ ಪೂರ್ವಾನುಮತಿ ಇಲ್ಲದೆ ಸಿಪಿಎಂ ಮುಖಂಡರು ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡಿ ಉಡುಪಿ ಬೋರ್ಡ್ ಹೈಸ್ಕೂಲಿನಿಂದ ಬ್ರಹ್ಮಗಿರಿ ವೃತ್ತದ ತನಕ ಮೆರವಣಿಗೆ ನಡೆಸಿದ್ದು, ಇದರಲ್ಲಿ ಕೆಲವರು ಮಾಸ್ಕ್ ಮತ್ತು ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳದೆ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಬಗ್ಗೆ ಇರುವ ಆದೇಶವನ್ನು ಉಲ್ಲಂಘನೆ ಮಾಡಿರುವುದಾಗಿ ಪೌರಾಯುಕ್ತ ಡಾ.ಉದಯ ಕುಮಾರ್ ಶೆಟ್ಟಿ ದೂರಿನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News