ತೋಡಿಗೆ ಬಿದ್ದು ವ್ಯಕ್ತಿ ಮೃತ್ಯು
Update: 2021-12-02 14:51 GMT
ಕುಂದಾಪುರ, ಡಿ.2: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಅಕಸ್ಮಿಕ ವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಡಿ.1ರಂದು ಸಂಜೆ ಕೋಡಿ ಗಡಿಯಾರ ಹಿತ್ಲು ಮೀನುಕೆರೆ ಎಂಬಲ್ಲಿ ನಡೆದಿದೆ.
ಮೃತರನ್ನು ಜೋಗ ಭಂಡಾರಿ (55) ಎಂದು ಗುರುತಿಸಲಾಗಿದೆ. ಇವರು ಗಾಳ ಹಾಕಿ ಮೀನು ಹಿಡಿಯಲು ಮೀನುಕೆರೆ ತೋಡಿಗೆ ಹೋಗಿದ್ದು, ಅಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ತೋಡಿನ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.