​ರಾಷ್ಟ್ರೀಯ ಲೋಕ್‌ ಅದಾಲತ್: ದಿನದಲ್ಲಿ ಒಟ್ಟು 3074 ಪ್ರಕರಣ ಇತ್ಯರ್ಥ

Update: 2021-12-18 16:12 GMT

ಉಡುಪಿ, ಡಿ.18: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಶನಿವಾರ ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತನ್ನು ಆಯೋಜಿಸಲಾ ಗಿದ್ದು, ಒಂದೇ ದಿನ ಒಟ್ಟು 3074 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು.

ಇವುಗಳಲ್ಲಿ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣ -31, ಚೆಕ್ಕು ಅಮಾನ್ಯ ಪ್ರಕರಣ-195, ಬ್ಯಾಂಕ್/ಹಣ ವಸೂಲಾತಿ ಪ್ರಕರಣ-17, ಎಂ.ವಿ.ಸಿ ಪ್ರಕರಣ -136, ವಿದ್ಯುತ್ ಶುಲ್ಕಕ್ಕೆ ಸಂಬಂಧಪಟ್ಟ ಪ್ರಕರಣ-2, ಎಂಎಂಆರ್‌ಡಿ ಆಕ್ಟ್ ಪ್ರಕರಣ-9, ವೈವಾಹಿಕ ಪ್ರಕರಣ-2, ಸಿವಿಲ್ ಪ್ರಕರಣ-169, ಇತರೇ ಕ್ರಿಮಿನಲ್ ಪ್ರಕರಣ-2268 ಹಾಗೂ ವ್ಯಾಜ್ಯ ಪೂರ್ವ ದಾವೆ-245 ಪ್ರಕರಣ ಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿ ಒಟ್ಟು 11,18,81,206 ರೂ. ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.

ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ ವಕೀಲರ ಸಂಘ, ಉಡುಪಿ, ಕುಂದಾಪುರ ಹಾಗೂ ಕಾರ್ಕಳ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕ್, ಕಕ್ಷಿಗಾರರು ಹಾಗೂ ಇತರ ಸರ್ಕಾರಿ ಇಲಾಖೆಯ ಸಂಪೂರ್ಣ ಸಹಕಾರದೊಂದಿಗೆ ಲೋಕ್ ಅದಾಲತ್‌ನ್ನು ಯಶಸ್ವಿ ಗೊಳಿಸಲಾಯಿತು ಎಂದು ಉಡುಪಿಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News