ಕೋಟೆಪುರ ಟಿಪ್ಪುಸುಲ್ತಾನ್ ಶಿಕ್ಷಣ ಸಂಸ್ಥೆಯಲ್ಲಿ ಸಾಧಕರಿಗೆ ಸನ್ಮಾನ

Update: 2021-12-19 15:17 GMT

ಮಂಗಳೂರು, ಡಿ.19: ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿರುವ ಕೋಟೆಪುರ ಟಿಪ್ಪುಸುಲ್ತಾನ್ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು,

ಶಾಸಕ ಯು.ಟಿ.ಖಾದರ್ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉಳ್ಳಾಲ ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಅಧ್ಯಕ್ಷತೆ ವಹಿಸಿದ್ದರು.

ಸಂಸ್ಥೆಯಲ್ಲಿ 34 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿ ಎಲ್ಸಿ ಡಿಸೋಜ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ಯಾಧರ್ ಶೆಟ್ಟಿ ಹಾಗೂ ಸಂಸ್ಥೆಯ ಹಳೆ ವಿದ್ಯಾರ್ಥಿ ರಾಝಿಕ್ ಉಳ್ಳಾಲ್ ಇವರನ್ನು ಸನ್ಮಾನಿಸಲಾಯಿತು.

ನಗರಸಭೆಯ ಅಧ್ಯಕ್ಷೆ ಚಿತ್ರಕಲಾ, ಉಪಾಧ್ಯಕ್ಷ ಯು.ಪಿ.ಅಯೂಬ್ ಉಳ್ಳಾಲ್, ಸ್ಥಾಯಿ ಸಮಿತಿಯ ಅಧ್ಯಕ್ಷ ಝರೀನಾ, ಪೌರಾಯುಕ್ತ ರಾಯಪ್ಪ, ಸದಸ್ಯ ಮುಹಮ್ಮದ್ ರಮೀಝ್, ಕ್ಲಸ್ಟರ್ ಬಿಆರ್‌ಪಿ. ಲೈಲಾ ಕಿಶೋರಿ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಶ್ವರಿ, ಉಳ್ಳಾಲ ದರ್ಗಾ ಉಪಾಧ್ಯಕ್ಷ ಯು.ಕೆ.ಮೋನು ಇಸ್ಮಾಯೀಲ್, ಲೆಕ್ಕ ಪರಿಶೋಧಕ ಯು.ಟಿ.ಇಲ್ಯಾಸ್, ಉದ್ಯಮಿ ಎಚ್.ಕೆ.ಖಾದರ್, ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಇಬ್ರಾಹೀಂ, ಕೋಶಾಧಿಕಾರಿ ಜೆ.ಅಬ್ದುಲ್ ಹಮೀದ್, ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಆಸಿಫ್ ಅಬ್ದುಲ್ಲಾ, ಕೋಟೆಪುರ ಜುಮಾ ಮಸೀದಿಯ ಅಧ್ಯಕ್ಷ ಅಬ್ಬಾಸ್, ಯುಕೆಎಫ್ ಅಸೋಸಿಯೇಶನ್ ಅಧ್ಯಕ್ಷ ಮುಹಮ್ಮದ್ ಮೂಸಾ, ದ.ಕ.ಜಿಲ್ಲಾ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆಎಂಕೆ ಮಂಜನಾಡಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಜಯವಂತಿ ಉಪಸ್ಥಿತರಿದ್ದರು. ಎ.ಕೆ.ಮೊಯಿದ್ದೀನ್ ಸ್ವಾಗತಿಸಿದರು. ಚಿತ್ರಕಲಾ ಶಿಕ್ಷಕ ರಫೀಕ್ ತುಂಬೆ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News