ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕರಾಗಿ ಬಿ.ಹಾರೂನ್ ಸಾಹೇಬ್

Update: 2021-12-22 15:23 GMT
ಹರೂನ್ ಸಾಹೇಬ್, ಮುನಾಫ್ ಕೋಡಿ

ಕುಂದಾಪುರ, ಡಿ.22: ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಬಿ.ಹಾರೂನ್ ಸಾಹೇಬ್ ನೇಮಕ ಗೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯ, ಮಾಜಿ ಸಭಾಪತಿ ಕೆ.ಪ್ರತಾಪ್‌ಚಂದ್ರ ಶೆಟ್ಟಿ ಅವರ ಸೂಚನೆಯಂತೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಅವರ ಶಿಫಾರಸ್ಸಿನಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ಅನುಮೋದನೆಯ ಮೂಲಕ ಹಾರೂನ್ ಸಾಹೇಬ್‌ರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಘಟಕದ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ನೇಮಿಸಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸ್ಮಾಯಿಲ್ ಆತ್ರಾಡಿ ಆದೇಶಿಸಿದ್ದಾರೆ.

ತಮ್ಮ ಏಳವೆಯಿಂದಲೂ ಕಟ್ಟಾ ಕಾಂಗ್ರೆಸ್ ಕಾರ್ಯಕರ್ತನಾಗಿ ಗುರುತಿಸಿ ಕೊಂಡಿರುವ ಹಾರೂನ್ ಸಾಹೇಬ್, ಕುಂದಾಪುರದ ಮಾಜಿ ಪುರಸಭಾಧ್ಯಕ್ಷ ರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಮುನಾಫ್ ಕೋಡಿ ಬ್ಲಾಕ್ ಅಧ್ಯಕ್ಷ: ಈ ನಡುವೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಮುನಾಫ್ ಕೋಡಿ ನೇಮಕಗೊಂಡಿದ್ದಾರೆ.

ಮುನಾಫ್ ಕೋಡಿ ಅವರು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯ ಕಾರಿ ಸದಸ್ಯರಾಗಿದ್ದು, ಯುವ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಲ್ಲೂ ಕಾರ್ಯನಿರ್ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News