ಡಿ.26ರಂದು ಎಸ್ ವೈ ಎಸ್ ಕರ್ನಾಟಕ ರಾಜ್ಯ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ

Update: 2021-12-25 13:31 GMT

ಉಳ್ಳಾಲ: ಎಸ್ ವೈ ಎಸ್ ಉಳ್ಳಾಲ ಸೆಂಟರ್ ವತಿಯಿಂದ ಎಸ್ ವೈ ಎಸ್ ಕರ್ನಾಟಕ ರಾಜ್ಯ ನೂತನ ಸಮಿತಿ ಪದಾಧಿಕಾರಿ ಗಳನ್ನು ಸನ್ಮಾನಿಸಿ ಅಭಿನಂದಿಸುವ ಗೌರವಾರ್ಪಣಾ ಕಾರ್ಯಕ್ರಮ ಡಿ. 26ರಂದು ಬೆಳಗ್ಗೆ 9 ಗಂಟೆಗೆ ಉಳ್ಳಾಲ ಆಝಾದ್ ನಗರದ ಇಸ್ಲಾಮಿಕ್ ನೋಲೇಜ್ ಸೆಂಟರಿನಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಸೆಂಟರ್ ಅಧ್ಯಕ್ಷ ಶಿಹಾಬುದ್ದೀನ್ ಸಖಾಫಿ ಉಳ್ಳಾಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News