ಎರಡೂ ಕಡೆ BJP ಸರ್ಕಾರವಿದ್ದರೂ ಜೀವಕ್ಕೆ ಬೆಲೆ ಇಲ್ಲ: ಹರ್ಷ ಸಹೋದರಿ ಅಶ್ವಿನಿ
Update: 2023-06-05 07:09 GMT
ಶಿವಮೊಗ್ಗ: ಕೆಲ ತಿಂಗಳ ಹಿಂದೆ ಕೊಲೆಯಾದ ಬಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬದವರಿಗೆ ಗುಂಪೊಂದು ಜೀವಬೆದರಿಕೆ ಹಾಕಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಸರಕಾರದ ವಿರುದ್ಧ ಹರ್ಷ ಸಹೋದರಿ ಅಶ್ವಿನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವಿನಿ, 'ನಮ್ಮ ಮನೆಯ ಬಳಿ ಕಿನಲ್ಲಿ ಬಂದಿದ್ದ ಗುಂಪೊಂದು ಕೂಗಾಡಿ ಬೆದರಿಕೆ ಹಾಕಿದೆ. ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಸರ್ಕಾರ ಇದ್ದರೂ ನಮ್ಮ ಜೀವಕ್ಕೆ ಬೆಲೆ ಇಲ್ಲವಾಗಿದೆ' ಎಂದು ಅಳಲು ತೋಡಿಕೊಂಡಿದ್ದಾರೆ.
' ಗೃಹ ಸಚಿವರು ನಮ್ಮ ಜಿಲ್ಲೆಯವರೇ ಆಗಿದ್ದರೂ ನಮಗೆ ರಕ್ಷಣೆ ಯಾವಾಗ ಸಿಗುತ್ತದೆ ಎಂದು ಪ್ರಶ್ನಿಸಿದ ಅವರು, ನಾವು ಪ್ರತಿದಿನ ಭಯದ ವಾತಾವರಣದಲ್ಲಿ ಬದುಕುವಂತಾಗಿದೆ' ಎಂದು ಹೇಳಿದರು.
ಇದನ್ನೂ ಓದಿ: ಶಿವಮೊಗ್ಗ | ಹರ್ಷ ಸಹೋದರಿ ಸಹಿತ 15 ಮಂದಿಯ ವಿರುದ್ಧ ಎಫ್ಐಆರ್ ದಾಖಲು