ಮನಪಾ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರಿಂದ ಆಕ್ಷೇಪಕಾರಿ ಹೇಳಿಕೆ: ಆರೋಪ
ಮಂಗಳೂರು, ಜ.1: ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ ವೊಬ್ಬರು ಮಹಿಳಾ ಸಂಘಟನೆಯ ಬಗ್ಗೆ ಆಕ್ಷೇಪಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ದ.ಕ.ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚ ಸದಸ್ಯರ ಈ ಹೇಳಿಕೆಯು ಖಂಡನೀಯ ಎಂದಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ ಕಾರ್ಪೊರೇಟರ್ ಎ.ಸಿ.ವಿನಯರಾಜ್ ಕಾಮಗಾರಿಗಳ ಬಗ್ಗೆ ಮಾತನಾಡುವಾಗ ಬಾವುಟಗುಡ್ಡೆಯ ಮಹಿಳಾ ಸಂಘಟನೆಯ ಬಗ್ಗೆ ಆಕ್ಷೇಪಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಕಾಮಗಾರಿಗಳಲ್ಲಿ ನೂನ್ಯತೆಗಳಿದ್ದರೆ ಅದನ್ನು ಹೇಳುವುದನ್ನು ಬಿಟ್ಟು, ಅಲ್ಲಿನ ಮಹಿಳಾ ಸಂಘಟನೆಯ ಬಗ್ಗೆ ಆರೋಪಗಳನ್ನು ಮಾಡುವುದು ಸರಿಯಲ್ಲ. ಈ ಬಗ್ಗೆ ಕಾಂಗ್ರೆಸ್ ನಾಯಕರು ಮೌನ ವಹಿಸಿರುವುದು ವಿಷಾದನೀಯ ಎಂದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಹಿಳಾ ಮೋರ್ಚಾದ ಮುಖಂಡರಾದ ರೂಪಾ ಡಿ.ಬಂಗೇರ, ಪೂರ್ಣಿಮಾ, ಸೇವಂತಿ ಶ್ರೀಯಾನ್, ಲೀಲಾವತಿ, ಪೂರ್ಣಿಮಾ ರಾವ್ ಉಪಸ್ಥಿತರಿದ್ದರು.