ಐವರ್ನಾಡು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

Update: 2022-01-02 13:34 GMT

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿನ ಬಾವಿಯಲ್ಲಿ ಪತ್ತೆಯಾದ ಘಟನೆ ರವಿವಾರ ನಡೆದಿದೆ.

ಐವರ್ನಾಡು ಗ್ರಾಮದ ಬಾಂಜಿಕೋಡಿ ನಿವಾಸಿ ದಿ.ಮಾಧವ ರವರ ಪುತ್ರ ಅರುಣ್ ಕುಮಾರ್ ಅವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಇವರು ಶುಕ್ರವಾರ ಮನೆಯಿಂದ ನಾಪತ್ತೆಯಾಗಿದ್ದರೆನ್ನಾಲಾಗಿದೆ. ಕಳೆದ ಎರಡು ದಿನಗಳಿಂದ ಸ್ಥಳೀಯರು ಮತ್ತು ಕುಟುಂಬಸ್ಥರು ಇವರನ್ನು ಹುಡುಕಾಟದಲ್ಲಿ ತೊಡಗಿಕೊಂಡಿದ್ದರು.

ರವಿವಾರ ಮುಂಜಾನೆ ರವಿಕುಮಾರ್ ರವರ ಮನೆಯ ಮುಂಭಾಗದಲ್ಲಿರುವ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅರುಣ್ ಕುಮಾರ್ ರವರು ಉಪ್ಪಿನಂಗಡಿಯಲ್ಲಿ ಫ್ಯಾಕ್ಟರಿಯೊಂದರಲ್ಲಿ ಮಾಸ್ಟರ್ ಪ್ಲಾನ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತ ಅರುಣ್ ಕುಮಾರ್ ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News