ಕೋಟೇಶ್ವರ : ಚಿನ್ನಾಭರಣ ಕಳವು; ಇಬ್ಬರು ಆರೋಪಿಗಳ ಬಂಧನ

Update: 2022-01-03 17:33 GMT

ಕುಂದಾಪುರ : ಓರಾ ಫೈನ್ ಜ್ಯುವೆಲರಿ, ಪ್ರೈ ಲಿ, ಸಂಸ್ಥೆಯ  ಬಾಪ್ತು  ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯನ್ನು ಕುಂದಾಪುರ ತಾಲೂಕಿನ ಕೋಟೇಶ್ವರದ ಯುವ ಮೆರಿಡಿಯನ್ ಹಾಲ್‌ನಲ್ಲಿ, ಡಿ. 27 ರಿಂದ ಡಿ. 29 ರ ತನಕ  ತೆರೆದಿದ್ದು ಈ ವೇಳೆ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಗ್ರಾಹಕರಂತೆ ಮಾರಾಟ ಮಳಿಗೆಗೆ ಬಂದು 2 ಜೊತೆ ಚಿನ್ನದ ಬಳೆಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ಸಿಸಿಟಿವಿ ಪೋಟೇಜ್ ಪರಿಶೀಲನೆ ವೇಳೆ ಗೊತ್ತಾಗಿದ್ದು ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ್ ಹಾಗೂ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರಚಂದ್ರ ಇತರ ಮಾರ್ಗದರ್ಶನದಲ್ಲಿ, ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ ಕೆ ರವರ ಮತ್ತು ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೆ ಇವರ ನಿರ್ದೇಶನದಲ್ಲಿ, ಕುಂದಾಪುರ ಪೊಲೀಸ್ ಠಾಣಾ ಉಪನಿರೀಕ್ಷಕ ಸದಾಶಿವ ಆರ್ ಗವರೋಜಿ ಹಾಗೂ ತನಿಖಾ ಪಿಎಸ್‌ಐ ರಮೇಶ್ ಆರ್ ಪವಾರ್ ನೇತೃತ್ವದಲ್ಲಿ, ಪತ್ತೆದಳದ ತಂಡವು ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಬಂಧಿಸಿದೆ.

ಮಹಾರಾಷ್ಟ್ರದ ಧನರಾಜ್ ವಿಜಯ ಪರ್‌ ಮಾರ್ ( 42) ಹಾಗೂ ಅಜಯಸಿಂಗ್ ಕಿಶೋರ್ (23)  ಎಂಬವರನ್ನು, ಮಹಾರಾಷ್ಟ್ರದ ಪುಣೆ ಎಂಬಲ್ಲಿ ಡಿ. 30ರಂದು  ದಸ್ತಗಿರಿ ಮಾಡಿ ಆರೋಪಿಗಳಿಂದ ಚಿನ್ನವನ್ನು ಸ್ವಾಧೀನ ಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News