ವಿಟ್ಲ: ಆಕಸ್ಮಿಕವಾಗಿ ಬಾವಿಗೆ ಬಿದ್ದ ಯುವತಿಯನ್ನು ರಕ್ಷಿಸಿದ ಯುವಕರ ತಂಡ

Update: 2022-01-06 17:16 GMT

ಬಂಟ್ವಾಳ: ಆಕಸ್ಮಿಕವಾಗಿ ಬಾವಿಗೆ ಬಿದ್ದ ಯುವತಿಯನ್ನು ಸ್ಥಳೀಯ ಯುವಕರ ತಂಡ ರಕ್ಷಿಸಿದ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದಲ್ಲಿ ನಡೆದಿದ್ದು, ಯುವಕರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಕೊಳ್ನಾಡು ಗ್ರಾಮದ ತಾಳಿತ್ತನೂಜಿ ಎಂಬಲ್ಲಿ ಯುವತಿಯೊಬ್ಬಳು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು, ಅಸಹಾಯಕ ಸ್ಥಿತಿಯಲ್ಲಿದ್ದ ಮನೆಯವರು, ಸ್ಥಳೀಯ ಯುವಕ ಅಬ್ದುಲ್ ಖಾದರ್‌ ರನ್ನು ಮೊಬೈಲ್ ಮುಖಾಂತರ ಸಂಪರ್ಕಿಸಿದಾಗ, ತಕ್ಷಣವೇ ಸ್ಪಂದಿಸಿದ ಯುವಕರ ತಂಡ ಯುವತಿಯನ್ನು ಮೇಲೆತ್ತಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ವಿಷಯ ತಿಳಿದ ತಕ್ಷಣ ಸ್ಥಳೀಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಕುಳಾಲು ಸುಭಾಶ್ಚಂದ್ರ ಶೆಟ್ಟಿ, ನಿಕಟಪೂರ್ವ ಜಿ. ಪಂಚಾಯತ್ ಸದಸ್ಯ ಎಂ.ಎಸ್. ಮಹಮ್ಮದ್, ಸುದೀಪ್ ಕುಮಾರ್ ಶೆಟ್ಟಿ, ಸಿದ್ದೀಕ್ ಶರವು, ಹಸೈನಾರ್ ಟಿ ತಾಳಿತ್ತನೂಜಿ ಮುಂತಾದವರು ಸ್ಥಳಕ್ಕೆ ಆಗಮಿಸಿ ಯುವತಿಯನ್ನು ಮೇಲೆತ್ತುವವರೆಗೂ ಸಲಹೆ ಸೂಚನೆಗಳನ್ನು ನೀಡಿ, ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಸಿ, ವೈದ್ಯರನ್ನು ಸಂಪರ್ಕಿಸಿ, ಮನೆಯವರಿಗೆ ಸಾಂತ್ವನ ಹೇಳಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News