ದ.ಕ.ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ: ನಳಿನ್ ಕುಮಾರ್ ಕಟೀಲ್

Update: 2022-01-09 15:52 GMT

ಮಂಗಳೂರು, ಜ. 9: ಪ್ರಕೃತಿ ಮತ್ತು ಪರಿಸರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಜಿಲ್ಲೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದರು.

ಪಣಂಬೂರು ಸಮೀಪದ ತಣ್ಣೀರುಬಾವಿಯಲ್ಲಿರುವ ಅರಣ್ಯ ಇಲಾಖೆಯ ಕಚೇರಿಯಲ್ಲಿ ರವಿವಾರ ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಅವರು ಚರ್ಚಿಸಿದರು.

ಸಸಿಹಿತ್ಲು ಹಾಗೂ ತಣ್ಣೀರುಬಾವಿ ಕಡಲ ತೀರಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾ ಗುತ್ತಿದೆ, ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ ವತಿಯಿಂದ ಪ್ರವಾಸಿಗರ ಅನುಕೂಲಕ್ಕೆ ಪ್ರಕೃತಿ ಮತ್ತು ಪರಿಸರಕ್ಕೆ ಅನುಕೂಲವಾಗುವ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ನಳಿನ್ ಸೂಚಿಸಿದರು.

ಮೂಲಭೂತ ಸೌಕರ್ಯಗಳು, ಸರ್ಫಿಂಗ್, ಪ್ರವಾಸಿಗರನ್ನು ಆಕರ್ಷಿಸುವ ಚಟುವಟಿಕೆಗಳಿಗೆ ಕರಾವಳಿ ನಿಯಂತ್ರಣ ವಲಯದ ನಿಯಮಗಳು (ಸಿಆರ್‌ಝಡ್)ಉಲ್ಲಂಘನೆಯಾಗದಂತೆ ಅಭಿವೃದ್ಧಿಗೆ ಕ್ರಮವಹಿಸುವಂತೆ ತಿಳಿಸಿದರು.

ಈ ಸಂದರ್ಭ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಶಾಸಕ ಡಾ. ಭರತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News