ಸುಳ್ಯ : ಕಟ್ಟಿಂಗ್ ಮೆಷಿನ್ ತಾಗಿ ಕಾರ್ಮಿಕ ಮೃತ್ಯು

Update: 2022-03-02 15:18 GMT

ಸುಳ್ಯ : ಕಬ್ಬಿಣ ಕಟ್ಟಿಂಗ್ ಮಾಡುವ ಮೆಷಿನ್ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಬುಧವಾರ ಐವರ್ನಾಡಿನಲ್ಲಿ ನಡೆದಿದೆ.

ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36) ಮೃತಪಟ್ಟವರು. ಮನೆ ಕೆಲಸ ಮಾಡುತ್ತಿದ್ದಾಗ ಕಬ್ಬಿಣವನ್ನು ಕಟ್ಟಿಂಗ್ ಮಾಡುತ್ತಿದ್ದಾಗ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ ಗಾಯಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News