ಕಾರು ಮರಕ್ಕೆ ಢಿಕ್ಕಿ: ಚಾಲಕ ಮೃತ್ಯು

Update: 2022-03-09 16:30 GMT

ಶಂಕರನಾರಾಯಣ, ಮಾ.9: ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದು ಚರಂಡಿಗೆ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಹೆಂಗವಳ್ಳಿ ಗ್ರಾಮದ ಹಣೆಜೆಡ್ಡು ಎಂಬಲ್ಲಿ ಮಾ.8ರಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ಚಾಲಕ ಎಸ್.ಸುಭಾಶ್ಚಂದ್ರ ಶೆಟ್ಟಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಅಲ್ಬಾಡಿ ಮೈಲ್ಲುಕಲ್ಲು ನಿವಾಸಿ ಗುಲಾಬಿ ಭಾಯಿ ಗಾಯಗೊಂಡು ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಗೋಳಿಯಂಗಡಿ ಕಡಗೆ ಹೋಗುತ್ತಿದ್ದ ಸುಭಾಶ್ಚಂದ್ರ ಶೆಟ್ಟಿ ಚಲಾಯಿಸುತ್ತಿದ್ದ ಕಾರು, ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಬಿತ್ತೆನ್ನಲಾಗಿದೆ. ಇದರ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡರು. ಅದರಲ್ಲಿ ಗಂಭೀರವಾಗಿ ಗಾಯಗೊಂಡ ಸುಭಾಶ್ಚಂದ್ರ ಶೆಟ್ಟಿ ಹಾಲಾಡಿ ಖಾಸಗಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಶಂಕರನಾರಾ ಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News