ರಾಷ್ಟ್ರೀಯ ಲೋಕ್ ಅದಾಲತ್; ಒಂದೇ ದಿನದಲ್ಲಿ ಒಟ್ಟು 3382 ಪ್ರಕರಣ ಇತ್ಯರ್ಥ
ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೆಶನದ ಮೇರೆಗೆ ಜ.12ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಒಟ್ಟು 3382 ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥ ಪಡೆಸಲಾಯಿತು.
ರಾಜೀಯಾಗಬಲ್ಲ ಅಪರಾಧಿಕ ಪ್ರಕರಣ -19, ಚೆಕ್ಕು ಅಮಾನ್ಯ ಪ್ರಕರಣ- 129, ಬ್ಯಾಂಕ್/ ಹಣ ವಸೂಲಾತಿ ಪ್ರಕರಣ-19, ಎಂ.ವಿ.ಸಿ ಪ್ರಕರಣ- 113, ವಿದ್ಯುತ್ ಶುಲ್ಕಕ್ಕೆ ಸಂಬಂಧಪಟ್ಟ ಪ್ರಕರಣ-1, ಎಂ.ಎಂಆರ್ಡಿ ಆಕ್ಟ್ ಪ್ರಕರಣ- 8, ವೈವಾಹಿಕ ಪ್ರಕರಣ- 3, ಸಿವಿಲ್ ಪ್ರಕರಣ- 157, ಇತರೆ ಕ್ರಿಮಿನಲ್ ಪ್ರಕರಣ- 2702 ಹಾಗೂ ವ್ಯಾಜ್ಯ ಪೂರ್ವ ದಾವೆ- 191 ಪ್ರಕರಣಗಳನ್ನು ರಾಜಿ ಮುಖಾಂತರ ಇತ್ಯರ್ಥಪಡಿಸಿ 9,88,32,860ರೂ. ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.
ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಉಡುಪಿ, ಕುಂದಾಪುರ ಹಾಗೂ ಕಾರ್ಕಳ, ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕ್, ಕಕ್ಷಿಗಾರರು ಹಾಗೂ ಇತರ ಸರಕಾರಿ ಇಲಾಖೆಯ ಸಂಪೂರ್ಣ ಸಹಕಾರದೊಂದಿಗೆ ಲೋಕ್ ಅದಾಲತ್ ಯಶಸ್ವಿಗೊಳಿಸಲಾಯಿತು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸುಬ್ರಹ್ಮಣ್ಯ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.