ಉದುಮ: ರಸ್ತೆ ಅಪಘಾತಕ್ಕೆ ಯುವಕರಿಬ್ಬರು ಬಲಿ

Update: 2022-03-20 05:39 GMT

ಕಾಸರಗೋಡು, ಮಾ.20: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಇಂದು ಮುಂಜಾನೆ ಉದುಮದಲ್ಲಿ ನಡೆದಿದೆ. 

ಮಲಪ್ಪುರಂ ನಿವಾಸಿಗಳಾದ ಜಂಶೀರ್(22) ಮತ್ತು ಮುಹಮ್ಮದ್ ಶಿಬಿಲ್ (20) ಮೃತಪಟ್ಟವರು. ಇವರಿಬ್ಬರು ಗೋವಾದಲ್ಲಿ ನಡೆಯಲಿರುವ ಐ.ಎಸ್.ಎಲ್. ಫುಟ್ಬಾಲ್ ಫೈನಲ್ ಪಂದ್ಯವನ್ನು ವೀಕ್ಷಿಸಲೆಂದು ಬೈಕಿನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ ಎಂದು ತಿಳಿದುಬಂದಿದೆ.

ಉದುಮದ ಪಳ್ಳ ಎಂಬಲ್ಲಿ ಇಂದು ಮುಂಜಾನೆ ಐದು ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಬೈಕಿಗೆ ಕಾಸರಗೋಡು ಕಡೆಯಿಂದ ತೆರಳುತ್ತಿದ್ದ ಲಾರಿ ಹೊಡದಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News