ರಂಗಕರ್ಮಿಗಳಿಗೆ ಮಲಬಾರ್ ವಿಶ್ವರಂಗ ಪುರಸ್ಕಾರ ಪ್ರದಾನ

Update: 2022-03-27 19:19 IST
ರಂಗಕರ್ಮಿಗಳಿಗೆ ಮಲಬಾರ್ ವಿಶ್ವರಂಗ ಪುರಸ್ಕಾರ ಪ್ರದಾನ
  • whatsapp icon

ಉಡುಪಿ : ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದೊಂದಿಗೆ ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಐವರು ಹಿರಿಯ ರಂಗಕರ್ಮಿಗಳಿಗೆ ‘ಮಲಬಾರ್ ವಿಶ್ವರಂಗ ಪುರಸ್ಕಾರ-೨೦೨೨’ವನ್ನು ರವಿವಾರ ಮಲಬಾರ್ ಗೋಲ್ಡ್ ಉಡುಪಿ ಶಾಖೆಯಲ್ಲಿ ಪ್ರದಾನ ಮಾಡಲಾಯಿತು.

ನಾಟಕಕಾರರು ಹಾಗೂ ವಿಮರ್ಶಕಿ ಕುಂದಾಪುರದ ಡಾ.ಪಾರ್ವತಿ ಜಿ. ಐತಾಳ್, ನಟ, ನಿರ್ದೇಶಕ ಮುಂಬೈಯ ಡಾ.ಭರತ್ ಕುಮಾರ್ ಪೊಲಿಪು, ಸಂಘಟಕ ಉಡುಪಿಯ ಬಿ.ಪ್ರಭಾಕರ್ ಭಂಡಾರಿ, ಸಂಘಟಕ ಮಂಗಳೂರಿನ ಅರೆಹೊಳೆ ಸದಾಶಿವ ರಾವ್, ನಟ ಹಾವೇರಿಯ ಶಂಕರ ಶಿವಪ್ಪತುಮ್ಮಣ್ಣ ಅವರಿಗೆ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ಪುರಸ್ಕಾರ ನೀಡ ಲಾಯಿತು.

ಸಭಾಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ತು ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಡಗುಬೆಟ್ಟು ಕೋ- ಆಪರೇಟಿವ್ ಸೊಸೈಟಿಯ ಮಹಾಪ್ರಬಂಧಕ ಜಯಕರ ಶೆಟ್ಟಿ ಇಂದ್ರಾಳಿ, ಮಣಿಪಾಲ ಮಾಹೆಯ ಯೋಗ ವಿಭಾಗದ ಮುಖ್ಯಸ್ಥೆ ಡಾ.ಅನ್ನಪೂರ್ಣ ಮಾತನಾಡಿದರು.

ಪ್ರತಿಷ್ಠಾನದ ಗೌರವಾಧ್ಯಕ್ಷ ಯು.ವಿಶ್ವನಾಥ್ ಶೆಣೈ, ಅಧ್ಯಕ್ಷ ಪ್ರೊ.ಶಂಕರ್, ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ಮುಖ್ಯಸ್ಥ ಹಫೀಝ್ ರೆಹಮಾನ್, ಪುರಸ್ಕಾರದ ಸಂಚಾಲಕ ರಾಜೇಶ್ ಭಟ್ ಪಣಿಯಾಡಿ ಉಪಸ್ಥಿತರಿದ್ದರು. ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಪ್ರಾಸ್ತಾವಿಕವಾಗಿ ಮಾತ ನಾಡಿದರು. ಸಂಧ್ಯಾ ಶೆಣೈ ಸ್ವಾಗತಿಸಿದರು. ಮಹೇಶ್ ಕಾರ್ಯಕ್ರಮ ನಿರೂಪಿಸಿ ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News