ಪ್ರತ್ಯೇಕ ಪ್ರಕರಣ: ಇಬ್ಬರ ನಾಪತ್ತೆ

Update: 2022-07-26 05:38 GMT

ಕಾರ್ಕಳ : ಹೊಟೇಲಿನಲ್ಲಿ ಕೆಲಸ ಮಾಡಿಕೊಂಡಿದ್ದ ಕುಕ್ಕುಂದೂರು ಗ್ರಾಮದ ಜಯಂತಿನಗರ ನಿವಾಸಿ ನಾಗರಾಜ ಪ್ರಭು(37) ಎಂಬವರು ತಂದೆ ಹಣ ನೀಡದ ಕಾರಣಕ್ಕಾಗಿ ಎ.೪ರಂದು ಮನೆಯಿಂದ ಹಣ ತೆಗೆದುಕೊಂಡು  ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ಮಾನಸಿಕ ಅಸ್ವಸ್ಥೆಯಾಗಿರುವ ಕರ್ಜೆ ಕೆಳಕಂಪ ನಿವಾಸಿ ರೇವತಿ (28) ಎಂಬವರು ಮಾ.೨೭ರಂದು ರಾತ್ರಿ ಮನೆಯಲ್ಲಿ ಮಲಗಿದ್ದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News