​ಕಾಸರಗೋಡು : ರಸ್ತೆ ಅಪಘಾತಕ್ಕೆ ಯುವಕ ಬಲಿ

Update: 2022-04-15 02:48 GMT

ಕಾಸರಗೋಡು : ಸ್ಕೂಟರ್ ಹಾಗೂ ಪಿಕಪ್  ವ್ಯಾನ್ ನಡುವೆ ಉಂಟಾದ ಅಪಘಾತದಲ್ಲಿ ಸವಾರನೋರ್ವ ಮೃತಪಟ್ಟ ಘಟನೆ ನಗರ ಹೊರವಲಯದ ಚೆಂಗಳ ನಾಲ್ಕನೇ  ಮೈಲ್ ನಲ್ಲಿ ರಾತ್ರಿ ನಡೆದಿದೆ.

ಬೋವಿಕ್ಕಾನ ಕರಿವೇಡಗದ ಅಬೂಬಕರ್ ಸಿದ್ದೀಕ್ (24) ಮೃತ ಯುವಕ ಎಂದು ಗುರುತಿಸಲಾಗಿದೆ. ಜೊತೆಗಿದ್ದ  ಶಮೀಸ್ ಗಾಯಗೊಂಡಿದ್ದಾರೆ. ಇವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಸಿಟಿಂಗ್ ವೀಸಾದಲ್ಲಿ ದುಬೈಗೆ ತೆರಳಿ ಒಂದು ತಿಂಗಳ ಹಿಂದೆಯಷ್ಟೇ ಊರಿಗೆ ಮರಳಿದ್ದನು. ವಿದ್ಯಾನಗರ  ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News