ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನ

Update: 2022-05-09 13:44 GMT

ಉಡುಪಿ : ಕರ್ನಾಟಕ ಸಾಹಿತ್ಯ ಅಕಾಡೆಮಿಯು ಬಿ.ಜಿ.ಎಲ್ ಸ್ವಾಮಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಮೇ ೨೭ರಿಂದ ೨೯ರವರೆಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊನ್ನೆಮರಡುನಲ್ಲಿ ಬಿ.ಜಿ.ಎಲ್.ಸ್ವಾಮಿ ಸಾಹಿತ್ಯ ಮತ್ತು ನಿಸರ್ಗಾನುಭವ ಅಧ್ಯಯನ ಶಿಬಿರ  ಎಂಬ ಮೂರು ದಿನಗಳ ಅಧ್ಯಯನ ಶಿಬಿರವನ್ನು ನಡೆಸಲಿದ್ದು, ಇದರಲ್ಲಿ ಪಾಲ್ಗೊಳ್ಳಲಿಚ್ಛಿಸುವ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. 

೨೦ರಿಂದ ೪೦ ವರ್ಷದೊಳಗಿನ ಅಭ್ಯರ್ಥಿಗಳು ಮೇ ೧೩ರ ಒಳಗೆ ಶಿಬಿರದಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್ - http://sahithyaacademy.karnataka.gov.in- ಅನ್ನು ಸಂಪರ್ಕಿಸುವಂತೆ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News