ಭಟ್ಕಳ: ಕಿಡಿಗೇಡಿಗಳಿಗೆ ಕಡಿವಾಣ ಹಾಕುವಂತೆ ವೆಲ್ಫೇರ್ ಪಾರ್ಟಿ ಒತ್ತಾಯ

Update: 2022-06-10 17:11 GMT

ಭಟ್ಕಳ: ಶಮ್ಸುದ್ದೀನ್ ವೃತ್ತಕ್ಕೆ ತಿರಂಗ ವೃತ್ತ ಎಂದು ಮರುನಾಮಕರಣ ಮಾಡುವಂತೆ ಬಿಜೆಪಿ ಯುವಮೋರ್ಚಾ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ವಿವಾದ ಹುಟ್ಟಿಕೊಂಡಿದ್ದು ಇದನ್ನು ವಿರೋಧಿಸಿ ಶುಕ್ರವಾರ ವೆಲ್ಫೇರ್ ಪಾರ್ಟಿಯಿಂದ ಸಹಾಯಕ ಆಯುಕ್ತರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

ಅಂದಿನ ಮೈಸೂರು ರಾಜ್ಯದಲ್ಲಿ ಉಪಹಣಕಾಸು ಸಚಿವರಾಗಿ ಜೋಗಜಲಪಾತದ ವಿದ್ಯುತ್ ಯೋಜನೆಯನ್ನು ಪೂರ್ಣಗೊಳಿಸಿ ಜಿಲ್ಲೆಗೆ ಬೆಳಕು ನೀಡಿದ ಭಟ್ಕಳದ ವಿವಾದತೀತ ವ್ಯಕ್ತಿ ದಿ.ಶಮ್ಸುದ್ದೀನ್ ಜೋಕಾಕು ಸಾಹೇಬರ ಹೆಸರಲ್ಲಿರುವ ಶಮ್ಸುದ್ದೀನ್ ವೃತ್ತದ ಹೆಸರಿನಲ್ಲಿ ಬಿಜೆಪಿಯವರು ವಿವಾದ ಸೃಷ್ಟಿಸಿದ್ದು ಇಂತಹ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕೆಂದು  ವೆಲ್ಫೇರ್ ಪಾರ್ಟಿ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಪಕ್ಷದ ಉ.ಕ.ಜಿಲ್ಲಾಧ್ಯಕ್ಷ ಡಾ.ನಸೀಮ್ ಖಾನ್, ಪ್ರಧಾನ ಕಾರ್ಯದರ್ಶಿ ಆಸೀಫ್ ಶೇಖ್, ಉಪಾಧ್ಯಕ್ಷ ಶೌಕತ್ ಖತೀಬ್, ಮುಖಂಡರಾದ ಅಬ್ದುಲ್ ಜಬ್ಬಾರ್ ಅಸದಿ ಮತ್ತಿತರರು ಉಪಸ್ತಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News