ಯುವ ಕಾಂಗ್ರೆಸ್‌ನಿಂದ ‘ಉದ್ಯೋಗ ಸೃಷ್ಟಿ’ ಆ್ಯಪ್ ಬಿಡುಗಡೆ

Update: 2022-07-16 15:57 GMT

ಉಡುಪಿ, ಜು.೧೬: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಾಲ್ಪಡ್ ಇವರ ಆದೇಶದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಯೂಥ್ ಜೋಡೊ ಬೂತ್ ಜೋಡೊ’ ಕಾರ್ಯಕ್ರಮ ಹಾಗೂ ಉದ್ಯೋಗ ಸೃಷ್ಟಿ ಎಂಬ ಆ್ಯಪ್‌ನ್ನು ಇಂದು ಇಲ್ಲಿ ಬಿಡುಗಡೆಗೊಳಿಸಲಾಗಿದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಸಂಯೋಜಕ ತೇಜಸ್ವ ಹೇಳಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಸೃಷ್ಟಿ ಆ್ಯಪ್ ಮೂಲಕ ಉಡುಪಿ ಜಿಲ್ಲೆಯ ಪ್ರತಿಯೊಂದು ವಿಧಾನ ಸಭಾ ಕ್ಷೇತ್ರಗಳ ಬ್ಲಾಕ್‌ಗಳಲ್ಲಿ ಹಾಗೂ ಪ್ರತಿ ಗ್ರಾಪಂ ಮಟ್ಟದಲ್ಲಿರುವ ನಿರುದ್ಯೋಗಿಗಳ ಸರ್ವೆ ನಡೆಯಲಿದೆ ಎಂದರು.

ಈ ಸರ್ವೆಯಿಂದ ಉದ್ಯೋಗದ ಕುರಿತಂತೆ ದೊರೆಯುವ ಮಾಹಿತಿಯನ್ನು ಕಲೆಹಾಕಲಾಗುವುದು. ಮುಂದೆ ನಮ್ಮ ಪಕ್ಷ ಅಧಿಕಾರಿಕ್ಕೆ ಬಂದರೆ ನಾವು ಯಾವ ರೀತಿಯ ಉದ್ಯೋಗ ಸೃಷ್ಟಿ ಮಾಡುವ ಯೋಜನೆಯನ್ನು ಹಾಕಿಕೊಳ್ಳಬೇಕು ಎಂಬ ಸ್ಪಷ್ಟ ಅರಿವು ಮೂಡಲಿದೆ ಎಂದರು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಯುವ ಕಾಂಗ್ರೆಸ್ ಕಾರ್ಯಕರ್ತರ ಮೂಲಕ ಆ್ಯಪ್‌ನ ಸಹಾಯದಿಂದ ನಿರುದ್ಯೋಗಿಗಳ ಸಂಪೂರ್ಣ ಮಾಹಿತಿಗಳನ್ನು ಕಲೆ ಹಾಕಲಾಗುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯ ಕೆ.ಆರ್., ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ನವೀನ್ ಕುಮಾರ್ ಹಾಗೂ ರಾಜ್ಯ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ನಾಸಿರ್ ಅಹ್ಮದ್ ಹಾಗೂ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಉಪಸ್ಥಿತ ರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News