ಬೌದ್ಧ ವಿಹಾರಗಳ ದುರಸ್ಥಿ, ನಿರ್ಮಾಣಕ್ಕೆ ಸಹಾಯಧನಕ್ಕಾಗಿ ಅರ್ಜಿಗಳ ಆಹ್ವಾನ
Update: 2022-07-23 13:15 GMT
ಉಡುಪಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬೌದ್ಧ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿರುವ ಬೌದ್ಧ ವಿಹಾರಗಳ ದುರಸ್ಥಿ, ನವೀಕರಣ ಹಾಗೂ ಸಮುದಾಯ ಭವನಗಳ ನಿರ್ಮಾಣಕ್ಕಾಗಿ ಸಹಾಯಧನ ಪಡೆಯಲು ಬೌದ್ಧ ವಿಹಾರಗಳ ವ್ಯವಸ್ಥಾಪನಾ ಹಾಗೂ ಜೀರ್ಣೋದ್ಧಾರ ಸಮಿತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ವೆಬ್ಸೈಟ್ - https://dom.karnataka.gov.in/udupi/public- ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ, ಮೌಲಾನಾ ಆಜಾದ್ ಭವನ, ಮಣಿಪಾಲ ದೂರವಾಣಿ ಸಂಖ್ಯೆ: ೦೮೨೦-೨೫೭೩೫೯೬ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.