ಬುಲೆಟ್ ಢಿಕ್ಕಿ: ಪಾದಚಾರಿ ಮೃತ್ಯು

Update: 2022-07-23 16:32 GMT

ಉಡುಪಿ : ಬುಲೆಟ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜು.22ರಂದು ರಾತ್ರಿ 9ಗಂಟೆಗೆ ಕಡಿಯಾಳಿ ಅನೀಶ್ ಟ್ರೇಡರ್ಸ್‌ ಎದುರುಗಡೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಕುಂಜಿಬೆಟ್ಟು ನಿವಾಸಿ ಶೇಷಗಿರಿ ಭಂಡಾರಿ (56) ಎಂದು ಗುರುತಿಸಲಾಗಿದೆ. ಉಡುಪಿ ಕೃಷ್ಣ ಸ್ಟೋರ್ಸ್‌ನಲ್ಲಿ ಸಾಮಗ್ರಿಗಳನ್ನು ಕಟ್ಟಿ ಕೊಡುವ ಕೆಲಸ ಮಾಡಿಕೊಂಡಿದ್ದ ಇವರು, ರಾತ್ರಿ ಕೆಲಸ ಮುಗಿಸಿ ಮನೆಗೆ ನಡೆದು ಕೊಂಡು ಬರುತ್ತಿದ್ದರು.

ಈ ವೇಳೆ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಬುಲೆಟ್ ಶೇಷಗಿರಿ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಇವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಬುಲೆಟ್ ಸವಾರ ಪ್ರಶಾಂತ್ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News