ಉಡುಪಿ ಜಿಲ್ಲಾ ಬಾಲಕಾರ್ಮಿಕರ ಸಂಘದ ಸಲಹಾ ಸಮಿತಿಗೆ ಅರ್ಜಿ ಆಹ್ವಾನ

Update: 2022-08-03 14:16 GMT

ಉಡುಪಿ, ಆ.3: ಉಡುಪಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ  ಸಲಹಾ ಸಮಿತಿಯ ಸದಸ್ಯರನ್ನು 2 ವರ್ಷದ ಅವಧಿಗೆ ನಾಮನಿರ್ದೇಶನ ಮಾಡುವ ಸಲುವಾಗಿ ಪ್ರತಿಷ್ಠಿತ ಸರ್ಕಾರೇತರ ಸಂಸ್ಥೆಯನ್ನು,  ಕಾರ್ಮಿಕ ಸಂಘಟನೆಯನ್ನು, ಮಾಲಕರ ಸಂಘವನ್ನು ಪ್ರತಿನಿಧಿಸುವ ಆಸಕ್ತ ವಿಷಯ ಪರಿಣಿತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿರುವ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಕೆಲಸ ಮಾಡಿರುವ ಮತ್ತು ಸ್ವಇಚ್ಚೆಯ ಮೇಲೆ ಕೆಲಸ ಮಾಡಲು ಇಚ್ಛಿಸುವ ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತ ಹಾಗೂ ಮಹಿಳಾ ವರ್ಗಕ್ಕೆ ಸೇರಿದ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

ಆಸಕ್ತರು ಬಿಳಿಹಾಳೆಯಲ್ಲಿ ವಿವರಗಳನ್ನು ನಮೂದಿಸಿ ಅರ್ಜಿಯನ್ನು ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ  ಆಗಸ್ಟ್ ೮ರೊಳಗಾಗಿ ಅಪರ ಜಿಲ್ಲಾಧಿಕಾರಿಗಳು/ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಸಲಹಾ ಸಮಿತಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ಇಲ್ಲಿಗೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News